ಕರ್ನಾಟಕ

karnataka

ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ವಿ. ಅನಂತ ನಾಗೇಶ್ವರನ್ ನೇಮಕ

By

Published : Jan 28, 2022, 8:08 PM IST

ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಹುದ್ದೆಗೆ ಡಾ.ವಿ.ಅನಂತ ನಾಗೇಶ್ವರನ್ ಅವರನ್ನ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ..

V Anantha Nageswaran
V Anantha Nageswaran

ನವದೆಹಲಿ :2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಲು ಕೇವಲ ಮೂರು ದಿನ ಬಾಕಿ ಉಳಿದಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ವಿ. ಅನಂತ ನಾಗೇಶ್ವರನ್​ ಅವರು ನೇಮಕಗೊಂಡಿದ್ದಾರೆ.

ಅನಂತ ನಾಗೇಶ್ವರನ್​ ಅವರು ಲೇಖಕ, ಪ್ರಾಧ್ಯಾಪಕ ಹಾಗೂ ಹಣಕಾಸು ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದು, ಭಾರತ ಮತ್ತು ಸಿಂಗಾಪುರದಲ್ಲಿ ಹಲವಾರು ಶಾಲೆಗಳು ಮತ್ತು ಮ್ಯಾನೇಜ್‌ಮೆಂಟ್‌ ಇನ್‌ಸ್ಟಿಟ್ಯೂಟ್‌ಗಳಲ್ಲಿ ಬೋಧನೆ ಮಾಡಿದ್ದಾರೆ.

ಇದನ್ನೂ ಓದಿರಿ:ಭಾರತದ 'ಬ್ರಹ್ಮೋಸ್' ಖರೀದಿಸಿದ ಮೊದಲ ದೇಶ ಫಿಲಿಪ್ಪೀನ್ಸ್​​.. ₹2,770 ಕೋಟಿ ರೂ. ಒಪ್ಪಂದ

2019 ರಿಂದ 2021ರವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ಸಲಹಾ ಮಂಡಳಿ ಅರೆಕಾಲಿಕ ಸದಸ್ಯರೂ ಆಗಿದ್ದ ಅನಂತ ನಾಗೇಶ್ವರನ್​, ಕೇಂದ್ರದ ಮುಖ್ಯ ಆರ್ಥಿಕ ತಜ್ಞರಾಗಿದ್ದ ಕೃಷ್ಣಮೂರ್ತಿ ಸುಬ್ರಮಣಿಯನ್​ ಅವರ ಸ್ಥಾನಕ್ಕೆ ನೇಮಕಗೊಂಡಿದ್ದಾರೆ. ಕೃಷ್ಣಮೂರ್ತಿ ಅವರು ಕಳೆದ ಅಕ್ಟೋಬರ್​​ 8ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

IFMR ಗ್ರಾಜ್ಯುಯೇಟ್​ ಸ್ಕೂಲ್​ ಆಫ್​ ಬ್ಯುಸಿನೆಸ್​ನ ಡೀನ್ ಆಗಿ ಕೆಲಸ ಮಾಡಿರುವ ಇವರು, 2019-21ರವರೆಗೆ ಪಿಎಂ ಆರ್ಥಿಕ ಸಲಹಾ ಮಂಡಳಿಯ ಅರೆಕಾಲಿಕ ಸದಸ್ಯರಾಗಿದ್ದರು. ಅಹಮದಾಬಾದ್​ನ ಇಂಡಿಯನ್​ ಇನ್​​ಸ್ಟಿಟ್ಯೂಟ್​ ಆಫ್​ ಮ್ಯಾನೇಜ್​ಮೆಂಟ್​​ನಿಂದ ಸ್ನಾತಕೋತ್ತರ ಡಿಪ್ಲೋಮಾ ಪದವಿ ಪಡೆದಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details