ಕರ್ನಾಟಕ

karnataka

ಬೆಂಳೂರಿನಿಂದ ಹೊರಟಿದ್ದ ವಿಮಾನ ಹೈದರಾಬಾದ್​ನಲ್ಲಿ ತುರ್ತು ಭೂ ಸ್ಪರ್ಶ!

By

Published : Apr 4, 2023, 9:58 AM IST

Updated : Apr 4, 2023, 11:32 AM IST

ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ವಿಮಾನವೊಂದು ಇಂದು ಬೆಳಗ್ಗೆ ತೆಲಂಗಾಣದ ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

emergency landing in Telangana  Flight from Bengaluru emergency landing  Varanasi bound IndiGo Flight  IndiGo Flight from Bengaluru emergency land  ವಿಮಾನ ಹೈದರಾಬಾದ್​ನಲ್ಲಿ ತುರ್ತು ಭೂ ಸ್ಪರ್ಶ  ಬೆಂಳೂರಿನಿಂದ ಹೊರಟಿದ್ದ ವಿಮಾನ  ಬೆಂಗಳೂರಿನಿಂದ ವಾರಣಿಸಿಗೆ ಹೊರಟಿದ್ದ ವಿಮಾನ  ತೆಲಂಗಾಣದ ಹೈದರಾಬಾದ್​ ವಿಮಾನ ನಿಲ್ದಾಣ  ಬೆಂಗಳೂರಿನಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ  ತೆಲಂಗಾಣದ ಶಂಶಾಬಾದ್ ವಿಮಾನ ನಿಲ್ದಾಣ  ವಿಮಾನವನ್ನು ತುರ್ತು ಭೂಸ್ಪರ್ಶ
ಬೆಂಳೂರಿನಿಂದ ಹೊರಟಿದ್ದ ವಿಮಾನ ಹೈದರಾಬಾದ್​ನಲ್ಲಿ ತುರ್ತು ಭೂ ಸ್ಪರ್ಶ

ಹೈದರಾಬಾದ್​, ತೆಲಂಗಾಣ:ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ (6E897) ತುರ್ತು ಭೂಸ್ಪರ್ಶ ಮಾಡಿದೆ. ಮಂಗಳವಾರ ಬೆಳಗ್ಗೆ 6.15ಕ್ಕೆ ತೆಲಂಗಾಣದ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ತಿಳಿದುಬಂದಿದೆ. ವಿಮಾನದಲ್ಲಿ 137 ಮಂದಿ ಪ್ರಯಾಣಿಸುತ್ತಿದ್ದರು.

ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಹೊರಡಿಸಿದ ಹೇಳಿಕೆ ಪ್ರಕಾರ, ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ವಿಮಾನ ತುರ್ತು ಭೂಸ್ಪರ್ಶದ ಹಿಂದೆ ತಾಂತ್ರಿಕ ದೋಷವಿದೆ ಎಂದು ಹೇಳಲಾಗುತ್ತಿದೆ. ವಿಮಾನದಲ್ಲಿ ಯಾವ ರೀತಿಯ ತಾಂತ್ರಿಕ ದೋಷ ಕಂಡುಬಂದಿದೆ ಎಂಬ ಸಂಪೂರ್ಣ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.

ಓದಿ:ಆಸ್ಕರ್​: ಬೊಮ್ಮನ್​, ಬೆಳ್ಳಿಗೆ ಇಂಡಿಗೋ ವಿಮಾನದಲ್ಲಿ ವಿಶೇಷ ಗೌರವ.. ಪ್ರಯಾಣಿಕರಿಂದ ಕರತಾಡನ

ಬೆಂಗಳೂರಿನಲ್ಲಿ ವಿಮಾನ ತುರ್ತು ಭೂ ಸ್ಪರ್ಶ:200 ಪ್ರಯಾಣಿಕರನ್ನು ಹೊತ್ತು ದುಬೈಗೆ ಹೊರಟಿದ್ದ ಎತಿಹಾದ್ ಏರ್ ವೇಸ್ ವಿಮಾನದಲ್ಲಿ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶಿಸಿದೆ.

ಏಪ್ರಿಲ್​ 2 ರಾತ್ರಿ 9.07 ಸಮಯದಲ್ಲಿ ಈ ಘಟನೆ ನಡೆದಿದೆ. ವಿಮಾನ ನಿಲ್ದಾಣದಿಂದ EY 237 ಸಂಖ್ಯೆಯ ಎತಿಹಾದ್​​ ವಿಮಾನ ಅಬು ಧಾಬಿಗೆ ಸಂಚರಿಸುತ್ತಿತ್ತು. ಆದರೆ, ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಕ್ಯಾಬಿನ್​ನಲ್ಲಿ ಒತ್ತಡ ಕಡಿಮೆಯಾಗಿದ್ದು ತುರ್ತು ಭೂಸ್ಪರ್ಶ ಮಾಡಿದೆ. ಘಟನೆಯಿಂದ ಪ್ರಯಾಣಿಕರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು. ವಿಮಾನ 4 ಗಂಟೆ ತಡವಾಗಿ ಮರು ಪ್ರಯಾಣ ಬೆಳೆಸಿತು ಎಂದು ತಿಳಿದು ಬಂದಿದೆ.

ಓದಿ:ವಿಮಾನಕ್ಕೆ ಡಿಕ್ಕಿಯಾದ ಹಕ್ಕಿ.. ಬಹರೇನ್​​ನಿಂದ ಮಂಗಳೂರು ತಲುಪಲು ಬೇಕಾಯಿತು 2 ದಿನ, ಪ್ರಯಾಣಿಕರು ಹೈರಾಣ

ಕ್ಯಾಬಿನ್​ ಸಿಬ್ಬಂದಿಗೆ ಕಿರುಕುಳ:ವಿಮಾನದಲ್ಲಿ ಪ್ರಯಾಣಿಕರ ಅಶಿಸ್ತಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ವಿಮಾನಯೊಂದರಲ್ಲಿ ಬ್ಯಾಂಕಾಕ್‌ನಿಂದ ಪ್ರಯಾಣಿಸುತ್ತಿದ್ದ ಸ್ವೀಡನ್​ ಪ್ರಯಾಣಿಕರೊಬ್ಬರು ಕ್ಯಾಬಿನ್ ಸಿಬ್ಬಂದಿಗೆ ಕಿರುಕುಳ ನೀಡಿದ್ದ ಆರೋಪದ ಮೇಲೆ ಬಂಧಿಸಲಾಗಿತ್ತು. ಬಳಿಕ ಆತನಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

63 ವರ್ಷದ ಸ್ವೀಡನ್ ಪ್ರಜೆ ಎರಿಕ್ ಹೆರಾಲ್ಡ್ ಜೊನಾಸ್ ವೆಸ್ಟ್‌ಬರ್ಗ್ ಎಂಬುವವರು ಮಾರ್ಚ್​ 30ರ ಗುರುವಾರದಂದು ವಿಮಾನದಲ್ಲಿ ಮುಂಬೈಗೆ ಬರುತ್ತಿದ್ದರು. ಈ ವೇಳೆ ವೆಸ್ಟ್‌ಬರ್ಗ್ ಕ್ಯಾಬಿನ್ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿ ಬಂದಿತು. ಎರಿಕ್​ ಈ ವೇಳೆ ಮದ್ಯಪಾನ ಮಾಡಿದ್ದರು. ಅಮಲಿನಲ್ಲಿದ್ದ ಈತ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಎಂದು ಆರೋಪಿಸಲಾಗಿದೆ.

ವಿಮಾನ ಮುಂಬೈ ತಲುಪಿದ ಬಳಿಕ ಎರಿಕ್​ ವಿರುದ್ಧ ದೂರು ನೀಡಿದ ಸಿಬ್ಬಂದಿ, ಆತನನ್ನು ಸ್ಥಳೀಯ ಪೊಲೀಸರಿಗೆ ಒಪ್ಪಿಸಲಾಯಿತು. ಸಿಬ್ಬಂದಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದರು. ಇದಾದ ಬಳಿಕ ಶುಕ್ರವಾರ ಎರಿಕ್​ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 20 ಸಾವಿರ ರೂಪಾಯಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಅಲ್ಲದೇ, ಪ್ರತಿ ಬಾರಿಯೂ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಓದಿ:ವಿಮಾನದಲ್ಲಿ ಮೊಬೈಲ್, ಸ್ಮಾರ್ಟ್‌ವಾಚ್, ಏರ್‌ಪಾಟ್ ಕದ್ದ ಸಿಬ್ಬಂದಿ

Last Updated : Apr 4, 2023, 11:32 AM IST

ABOUT THE AUTHOR

...view details