ಶ್ರೀನಗರ(ಜಮ್ಮು ಕಾಶ್ಮೀರ್):ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಲಾಲ್ಬಜಾರ್ನಲ್ಲಿ ಪೊಲೀಸರ ಮೇಲೆ ನಿನ್ನೆ ಸಂಜೆ ಉಗ್ರರು ನಡೆಸಿದ ದಾಳಿಯ ವಿಡಿಯೋ ಬಹಿರಂಗವಾಗಿದೆ. ದಾಳಿಯಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಮುಷ್ತಾಕ್ ಅಹ್ಮದ್ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಈಗ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ದಾಳಿಯ ಬಗ್ಗೆ ಐಸಿಸ್ನ ಟ್ವಿಟರ್ ಹ್ಯಾಂಡಲ್ನಲ್ಲಿ ವಿಡಿಯೋವೊಂದು ಕಾಣಿಸಿಕೊಂಡಿದ್ದು, ಇದರಲ್ಲಿ ಉಗ್ರನೊಬ್ಬ ಪೊಲೀಸ್ ವಾಹನದ ಮೇಲೆ ಗುಂಡು ಹಾರಿಸಿದ್ದಾನೆ. ಅಷ್ಟೇ ಅಲ್ಲದೇ ವಾಹನದ ಹೊರಗೆ ನಿಂತಿದ್ದ ಪೊಲೀಸರ ಮೇಲೆಯೂ ಸಹ ಗುಂಡುಗಳು ಹಾರಿಸಿದ್ದಾನೆ. ಆದ್ರೆ ಪೊಲೀಸರಿಗೆ ಗುಂಡೇಟು ಬಿದ್ದಿದ್ದು, ತಮ್ಮನ್ನು ರಕ್ಷಿಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಲಾಲ್ ಬಜಾರ್ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಶಂಕಿತ ಉಗ್ರರು ಪೊಲೀಸ್ ಚೆಕ್ ಪೋಸ್ಟ್ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಮೂವರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದರು. ಆದ್ರೆ ಇನ್ಸ್ಪೆಕ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಮೃತರು ಕೋಲ್ಗಾಕಟ್ ಜಿಲ್ಲೆಯ ನಿವಾಸಿಯಾಗಿದ್ದಾರೆ.