ಕರ್ನಾಟಕ

karnataka

ರಾಮನವಮಿ ಆಚರಣೆ ವೇಳೆ ಹಿಂಸಾಚಾರ : ಮಧ್ಯಪ್ರದೇಶದಲ್ಲಿ ಕರ್ಫ್ಯೂ ವಿಧಿಸಿದ ಪೊಲೀಸರು

By

Published : Apr 11, 2022, 12:16 PM IST

ರಾಮನವಮಿ ಮೆರವಣಿಗೆಯಲ್ಲಿ ಡಿಜೆ ಸಂಗೀತವನ್ನು ಜೋರಾಗಿ ಹಾಕಿರುವುದನ್ನು ವಿರೋಧಿಸಿದ ನಿರ್ದಿಷ್ಟ ಸಮುದಾಯದ ಜನರು ಮೆರವಣಿಗೆಯ ಮೇಲೆ ದಾಳಿ ಮಾಡಿದ್ದಾರೆ. ಇದು ಎರಡು ಸಮುದಾಯಗಳ ನಡುವೆ ಘರ್ಷಣೆಗೆ ಕಾರಣವಾಗಿ, ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ಕೈಮೀರಿದ ಕಾರಣ ಜನರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ..

police-impose-curfew-in-mp
ಮಧ್ಯಪ್ರದೇಶದಲ್ಲಿ ಕರ್ಫ್ಯೂ ವಿಧಿಸಿದ ಪೊಲೀಸರು

ಭೋಪಾಲ್ :ಭಾನುವಾರ ರಾಮನವಮಿ ಆಚರಣೆ ವೇಳೆ ಮಧ್ಯಪ್ರದೇಶದ ಎರಡು ಜಿಲ್ಲೆಗಳಲ್ಲಿ ಕೋಮುಗಲಭೆ ಭುಗಿಲೆದ್ದಿದೆ. ಖಾರ್ಗೋನ್ ಜಿಲ್ಲೆಯಲ್ಲಿ ಮೊದಲ ಹಿಂಸಾಚಾರದ ಘಟನೆ ವರದಿಯಾಗಿದೆ. ಸುಮಾರು ಆರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಬರ್ವಾನಿ ಜಿಲ್ಲೆಯ ಸೆಂಧ್ವಾ ಪಟ್ಟಣದಲ್ಲಿಯೂ ಇದೇ ರೀತಿಯ ಘಟನೆ ಸಂಭವಿಸಿದೆ. ಇದೀಗ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಮಧ್ಯಪ್ರದೇಶದ ಮೂರು ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಿ, CrPCಯ ಸೆಕ್ಷನ್ 144 ಹೇರಿದ್ದಾರೆ.

ಖಾರ್ಗೋನ್‌ನಲ್ಲಿ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆಗಳೂ ವರದಿಯಾಗಿದೆ. ಈ ಹಿಂಸಾಚಾರದ ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಲು ಪೊಲೀಸರು ಅಶ್ರುವಾಯು ಶೆಲ್‌(ಟೀಯರ್​ ಗ್ಯಾಸ್​ ಶೆಲ್​)ಗಳನ್ನು ಹಾರಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕಲ್ಲು ತೂರಾಟದಲ್ಲಿ ಕೆಲವು ಪೊಲೀಸ್ ಸಿಬ್ಬಂದಿ ಮತ್ತು ಜನರು ಗಾಯಗೊಂಡಿದ್ದಾರೆ.

ರಾಮನವಮಿ ಮೆರವಣಿಗೆಯಲ್ಲಿ ಡಿಜೆ ಸಂಗೀತವನ್ನು ಜೋರಾಗಿ ಹಾಕಿರುವುದನ್ನು ವಿರೋಧಿಸಿದ ನಿರ್ದಿಷ್ಟ ಸಮುದಾಯದ ಜನರು ಮೆರವಣಿಗೆಯ ಮೇಲೆ ದಾಳಿ ಮಾಡಿದ್ದಾರೆ. ಇದು ಎರಡು ಸಮುದಾಯಗಳ ನಡುವೆ ಘರ್ಷಣೆಗೆ ಕಾರಣವಾಗಿ, ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ಕೈಮೀರಿದ ಕಾರಣ ಜನರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

ಇತರ ಕೆಲವು ಸ್ಥಳೀಯ ಪೊಲೀಸ್ ಠಾಣೆಗಳಿಂದ ಹೆಚ್ಚುವರಿ ಪಡೆಗಳನ್ನು ಘಟನೆ ಸಂಭವಿಸಿದ ಸ್ಥಳದಲ್ಲಿ ನಿಯೋಜಿಸಲಾಯಿತು. ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ಪೊಲೀಸ್ ಸಿಬ್ಬಂದಿ ತಿಳಿಸಿದ್ದಾರೆ. ತಪ್ಪು ಮಾಹಿತಿಗಳನ್ನು ಪರಿಗಣಿಸಿ ವದಂತಿಗಳನ್ನು ಹರಡಬೇಡಿ ಖಾರ್ಗೋನ್ ಜಿಲ್ಲಾಡಳಿತ ಭಾನುವಾರ ತಡರಾತ್ರಿ ಜನರಿಗೆ ಮನವಿ ಮಾಡಿದೆ. ನಗರದಲ್ಲಿ ಈಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಇದೇ ರೀತಿಯ ರಾಮನವಮಿ ಮೆರವಣಿಗೆಯ ಸಂದರ್ಭ ಹಿಂಸಾಚಾರ ನಡೆದಿರುವ ಘಟನೆ ಬರ್ವಾನಿ ಜಿಲ್ಲೆಯ ಸೆಂಧ್ವಾ ಪಟ್ಟಣದಲ್ಲಿಯೂ ವರದಿಯಾಗಿದೆ. ಘಟನೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಐದಾರು ಜನರು ಗಾಯಗೊಂಡಿದ್ದಾರೆ. ಪೂಜಾ ಸ್ಥಳವನ್ನೂ ಧ್ವಂಸಗೊಳಿಸಲಾಗಿದೆ. ಈ ಜಿಲ್ಲೆಯಲ್ಲಿ ಸಂಜೆಯ ವೇಳೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ:ರಾಮನವಮಿ ಮೆರವಣಿಗೆ ಮೇಲೆ ಕಲ್ಲು ತೂರಿ, ಬೆಂಕಿ ಹಚ್ಚಿದ ಕಿಡಿಗೇಡಿಗಳು..

ABOUT THE AUTHOR

...view details