ಕರ್ನಾಟಕ

karnataka

By

Published : Sep 14, 2022, 11:56 AM IST

ETV Bharat / bharat

ಮಳೆಯಾರ್ಭಟಕ್ಕೆ ಆಸ್ಪತ್ರೆಯೊಳಗೆ ನುಗ್ಗಿದ ನೀರು.. ರೋಗಿಗಳ ಪಾಡು ಹರೋಹರ

ಜಾರ್ಖಂಡ್​ನಲ್ಲಿ ನಿನ್ನೆ ತಡರಾತ್ರಿ ಸುರಿದ ಭಾರಿ ಮಳೆಗೆ ಆಸ್ಪತ್ರೆಯೊಳಗೆ ನೀರು ನುಗ್ಗಿ, ರೋಗಿಗಳು ಇನ್ನಿಲ್ಲದ ತೊಂದರೆ ಅನುಭವಿಸುವಂತಾಗಿದೆ.

Water entered burn ward of MGM Hospital
Water entered burn ward of MGM Hospital

ಜೆಮ್​​ಶೆಡ್​​​ಪುರ(ಜಾರ್ಖಂಡ್​): ರಾಜ್ಯದ ಜನತೆಗೆ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ನೀಡಲಾಗುವುದು ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್​​ ಹೇಳಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ರಾಜ್ಯದಲ್ಲಿರುವ ಪ್ರಮುಖ ವೈದ್ಯಕೀಯ ಆಸ್ಪತ್ರೆ ಹಾಗೂ ಕಾಲೇಜ್​​ ಎಂಜಿಎಂನ ಚಿತ್ರಣ ಮಾತ್ರ ವಿಭಿನ್ನವಾಗಿದೆ.

ಮಳೆಯಾರ್ಭಟಕ್ಕೆ ಆಸ್ಪತ್ರೆಯೊಳಗೆ ನುಗ್ಗಿದ ನೀರು...

ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಆಸ್ಪತ್ರೆಯ ಬಹುತೇಕ ವಾರ್ಡ್​​​​ನೊಳಗೆ ನೀರು ನುಗ್ಗಿದೆ. ಹೀಗಾಗಿ, ರೋಗಿಗಳು ಸಂಕಷ್ಟ ಅನುಭವಿಸುವಂತಾಗಿದೆ. ತಾವು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬೆಡ್​​ನಿಂದ ಕಳೆಗಡೆ ಕಾಲಿಡಲು ಕಷ್ಟ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ವಾರ್ಡ್​​ನೊಳಗೆ ನೀರು ನುಗ್ಗಿರುವ ಕಾರಣ ಆಸ್ಪತ್ರೆಯಲ್ಲಿ ಶುಶ್ರೂಷಕರಾಗಿ ಕೆಲಸ ಮಾಡ್ತಿದ್ದವರು ನೀರು ಹೊರಹಾಕುವ ಕೆಲಸದಲ್ಲಿ ಮಗ್ನರಾಗಿರುವುದು ಕಂಡು ಬಂದಿದೆ. ಜೊತೆಗೆ ರೋಗಿಗಳು ಅನೇಕ ಗಂಟೆಗಳ ಕಾಲ ಬೆಡ್​ ಮೇಲೆ ಕುಳಿತುಕೊಳ್ಳುವಂತೆ ಸೂಚನೆ ನೀಡಿರುವ ಘಟನೆ ಸಹ ನಡೆದಿದೆ.

ಇದನ್ನೂ ಓದಿ:ಗದಗ: ಔಷಧ ಉಗ್ರಾಣಕ್ಕೆ ನುಗ್ಗಿದ ಮಳೆ ನೀರು.. ಅಂದಾಜು 4 ಕೋಟಿ ಮೌಲ್ಯದ ಔಷಧಗಳು ಜಲಾವೃತ

ಮಳೆ ನೀರಿನ ಜೊತೆಗೆ ವಾರ್ಡ್​​ನೊಳಗೆ ಅಪಾರ ಪ್ರಮಾಣದಲ್ಲಿ ಕಸ ನುಗ್ಗಿರುವ ಕಾರಣ, ಅಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ರೋಗಿಗಳಿಗೆ ಮತ್ತಷ್ಟು ಸೋಂಕು ತಗಲುವ ಅಪಾಯವಿದೆ ಎನ್ನಲಾಗ್ತಿದೆ. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ, ಜಾರ್ಖಂಡ್​, ಹರಿಯಾಣ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಮಳೆಯಾರ್ಭಟ ಜೋರಾಗಿದ್ದು, ಜನರು ಹಲವು ಮಸ್ಯೆಗಳನ್ನು ಎದುರಿಸುವಂತಾಗಿದೆ.

ABOUT THE AUTHOR

...view details