ಕರ್ನಾಟಕ

karnataka

ETV Bharat / bharat

ಕಾವೇರಿ ನೀರು: CWMA ಆದೇಶಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲಿದ್ದೇವೆ; ಸಿಎಂ ಸಿದ್ದರಾಮಯ್ಯ - ಸಿಡಬ್ಲ್ಯೂಎಂಎ ಆದೇಶಕ್ಕೆ ಸುಪ್ರೀಂ ಕೋರ್ಟ್ ನಲ್ಲಿ

ಕಾವೇರಿ ನದಿ ನೀರು ವಿಷಯದಲ್ಲಿ ಸಿಡಬ್ಲ್ಯೂಎಂಎ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್​ ಕದ ತಟ್ಟುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

"We seek to stay on CWMA order in Supreme Court
"We seek to stay on CWMA order in Supreme Court

By ANI

Published : Sep 20, 2023, 3:22 PM IST

Updated : Sep 20, 2023, 3:27 PM IST

ನವದೆಹಲಿ: ಕಾವೇರಿ ನದಿ ನೀರು ವಿಚಾರದಲ್ಲಿ ಸಿಡಬ್ಲ್ಯೂಎಂಎ ಆದೇಶಕ್ಕೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರು ಮತ್ತು ಸರ್ವಪಕ್ಷಗಳ ಸಂಸದರೊಂದಿಗೆ ಸಭೆ ನಡೆಸಿದ ನಂತರ ಅವರು ಮಾತನಾಡಿದರು.

ಸಿಡಬ್ಲ್ಯೂಎಂಎ ಆದೇಶಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ತಡೆಯಾಜ್ಞೆ ಕೋರಲಿದ್ದೇವೆ. ತಮಿಳುನಾಡಿಗೆ ನೀರು ಬಿಡುವಂತೆ ಸಿಡಬ್ಲ್ಯೂಎಂಎ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ನಾವು ಸುಪ್ರೀಂ ಕೋರ್ಟ್ ಗೆ ಮನವಿ ಮಾಡುತ್ತೇವೆ. ನಮ್ಮ ನೈಜ ಪರಿಸ್ಥಿತಿಯನ್ನು ಸಿಡಬ್ಲ್ಯೂಎಂಎ ಮುಂದೆ ಸಮರ್ಥವಾಗಿ ಪ್ರಸ್ತುತಪಡಿಸಿದ್ದೇವೆ. 123 ವರ್ಷಗಳಲ್ಲಿ ಈ ವರ್ಷದ ಆಗಸ್ಟ್​ನಲ್ಲಿ ಅತ್ಯಂತ ಕಡಿಮೆ ಮಳೆಯಾಗಿದ್ದು, ಹೆಚ್ಚಿನ ಸಂಕಷ್ಟಕ್ಕೆ ಕಾರಣವಾಗಿದೆ. ನಮಗೇ ಕುಡಿಯುವ ನೀರಿಲ್ಲ, ಬೆಳೆ ರಕ್ಷಣೆಗೆ ನೀರಿಲ್ಲ, ಕೈಗಾರಿಕೆಗಳಿಗೆ ನೀರಿಲ್ಲ. ನಾವು ಸಾಕಷ್ಟು ತೊಂದರೆಯಲ್ಲಿದ್ದೇವೆ." ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಎರಡೂ ರಾಜ್ಯಗಳೊಂದಿಗೆ ಮಾತನಾಡುವ ಅಧಿಕಾರ ಪ್ರಧಾನಿಗೆ ಇರುವುದರಿಂದ ಈ ವಿಷಯದಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕು ಎಂದು ಸಿಎಂ ಹೇಳಿದರು. "ಎರಡೂ ರಾಜ್ಯಗಳೊಂದಿಗೆ ಮಾತನಾಡುವ ಅಧಿಕಾರ ಪ್ರಧಾನಿಗೆ ಇದೆ. ಆದ್ದರಿಂದ ನಾವು ಪ್ರಧಾನಿಯವರ ಮಧ್ಯಪ್ರವೇಶಕ್ಕಾಗಿ ಮನವಿ ಮಾಡಿದ್ದೇವೆ. ಕೇಂದ್ರ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಾಗಲೇ ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದೆ. ಕಳೆದ 123 ವರ್ಷಗಳಲ್ಲಿಯೇ ಈ ಬಾರಿ ಆಗಸ್ಟ್​ನಲ್ಲಿ ಅತಿ ಕಡಿಮೆ ಮಳೆಯಾಗಿದೆ" ಎಂದು ಸಿದ್ದರಾಮಯ್ಯ ನುಡಿದರು.

ಕಾವೇರಿ ನದಿ ನೀರು ಹಂಚಿಕೆ ವಿವಾದದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರು ಮತ್ತು ಕರ್ನಾಟಕದ ಸರ್ವಪಕ್ಷ ಸಂಸದರ ಸಭೆ ಇಂದು ನವದೆಹಲಿಯಲ್ಲಿ ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಸಂಸದರು ತಮ್ಮ ಹೋರಾಟಕ್ಕೆ ಬೆಂಬಲ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

"ನಾವು ತುಂಬಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಸಿಡಬ್ಲ್ಯೂಎಂಎ 15 ದಿನಗಳವರೆಗೆ 5000 ಕ್ಯೂಸೆಕ್ ನೀರು ಬಿಡುವಂತೆ ನಮಗೆ ಆದೇಶಿಸಿದೆ. ನಮಗೆ ಕುಡಿಯಲು ಸಹ ನೀರಿಲ್ಲ. ನಾವು ಇದನ್ನು ಎಲ್ಲಾ ಸಂಸತ್ ಸದಸ್ಯರೊಂದಿಗೆ ಚರ್ಚಿಸಿದ್ದೇವೆ. ಅವರು ನಮ್ಮ ಹೋರಾಟವನ್ನು ಬೆಂಬಲಿಸುವ ಭರವಸೆ ನೀಡಿದ್ದಾರೆ. ನಮಗೆ ನ್ಯಾಯ ಒದಗಿಸುವಂತೆ ನಾವು ಸುಪ್ರೀಂ ಕೋರ್ಟ್​ಗೆ ಮನವಿ ಮಾಡುತ್ತಿದ್ದೇವೆ. ನಮಗೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿದೆ" ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಇದನ್ನೂ ಓದಿ :ಮಹಿಳಾ ಮೀಸಲಾತಿ ಮಸೂದೆ ತಕ್ಷಣ ಕಾನೂನಾಗಲಿ; ಸೋನಿಯಾ ಗಾಂಧಿ ಒತ್ತಾಯ

Last Updated : Sep 20, 2023, 3:27 PM IST

ABOUT THE AUTHOR

...view details