ಕರ್ನಾಟಕ

karnataka

By

Published : Apr 20, 2022, 4:48 PM IST

ETV Bharat / bharat

ಮದುವೆ ಮಾಡಿಕೊಳ್ಳುವಂತೆ ಕಾನ್​ಸ್ಟೇಬಲ್ ಕಿರುಕುಳ; ಆತ್ಮಹತ್ಯೆಗೆ ಶರಣಾದ ಯುವತಿ

ತನ್ನನ್ನು ಮದುವೆ ಮಾಡಿಕೊಳ್ಳುವಂತೆ ಮೇಲಿಂದ ಮೇಲೆ ಕಿರುಕುಳ ನೀಡಿದ್ದಕ್ಕಾಗಿ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

WOMAN COMMITTED SUICIDE
WOMAN COMMITTED SUICIDE

ಹನುಮಕೊಂಡ(ತೆಲಂಗಾಣ):ಕಾನ್​ಸ್ಟೇಬಲ್​​ ನೀಡುತ್ತಿದ್ದ ಮಾನಸಿಕ ಕಿರುಕುಳ ತಾಳಲಾರದೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನುಮಕೊಂಡ ಜಿಲ್ಲೆಯ ಸಾಯನಪೇಟ ಮಂಡಲದ ತಾಹರಾಪುರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸಂಗೀತಾ(30) ಎಂದು ಗುರುತಿಸಲಾಗಿದೆ.

ತಾಹರಾಪುರದ ಸಂಗೀತಾ ಐಸಿಡಿಎಸ್ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲ ತಿಂಗಳ ಹಿಂದೆ ಹನುಮಕೊಂಡ ಪೊಲೀಸ್ ಠಾಣೆಯ ಕಾನ್​ಸ್ಟೇಬಲ್​ ಸರ್ವೆ ಯಾದವ್​ ಎಂಬಾತನ ಪರಿಚಯವಾಗಿತ್ತು. ಇದಾದ ಬಳಿಕ ತನ್ನೊಂದಿಗೆ ಮದುವೆ ಮಾಡಿಕೊಳ್ಳುವಂತೆ ಆತ ಫೋನ್ ಮಾಡಿ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಇದರಿಂದ ಮನನೊಂದ ಯುವತಿ ಕ್ರಿಮಿನಾಶಕ ಸೇವನೆ ಮಾಡಿದ್ದಾಳೆ. ಇದರ ಬೆನ್ನಲ್ಲೇ ತನ್ನ ತಂಗಿಗೆ ಮಾಹಿತಿ ನೀಡಿದ್ದಾಳೆ. ಕುಟುಂಬಸ್ಥರಿಗೆ ವಿಚಾರ ಗೊತ್ತಾಗುತ್ತಿದ್ದಂತೆ ಆಸ್ಪತ್ರೆಗೆ ಸಾಗಿಸಲು ಮುಂದಾದರೂ ಪ್ರಯೋಜನವಾಗಲಿಲ್ಲ.

ಇದನ್ನೂ ಓದಿ:ಸಾಂಪ್ರದಾಯಿಕ ಚಿಕಿತ್ಸೆಗಾಗಿ ಭಾರತಕ್ಕೆ ಬರುವವರಿಗಾಗಿ 'ಆಯುಷ್​ ವೀಸಾ' ಕೆಟಗರಿ ಆರಂಭ: ಮೋದಿ

ಘಟನೆಗೆ ಸಂಬಂಧಿಸಿದಂತೆ ಯುವತಿಯ ತಂದೆ ವೀರಯ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆಂದು ಎಸ್​ಐ ವೀರಭದ್ರರಾವ್ ತಿಳಿಸಿದ್ದಾರೆ.

ABOUT THE AUTHOR

...view details