ಕರ್ನಾಟಕ

karnataka

ETV Bharat / bharat

ಸಂಸತ್ತಿನಲ್ಲಿ ಮೀಸಲಾತಿ ಮಸೂದೆ ಪಾಸ್​: ಮಹಿಳಾ ಸಂಸದರಿಂದ ಪ್ರಧಾನಿ ಮೋದಿಗೆ ಜೈಕಾರ - ಮಹಿಳಾ ಮೀಸಲಾತಿ ಮಸೂದೆ

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದೆ. ದೇಶದೆಲ್ಲೆಡೆ ಐತಿಹಾಸಿಕ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ನಿನ್ನೆ ಮಹಿಳಾ ಸಂಸದರು ಪ್ರಧಾನಿ ಮೋದಿಗೆ ಹೂಗುಚ್ಛ ನೀಡಿ ಧನ್ಯವಾದ ಸಲ್ಲಿಸಿದರು.

ಮೋದಿಗೆ ಸ್ವಾಗತ
ಮೋದಿಗೆ ಸ್ವಾಗತ

By ETV Bharat Karnataka Team

Published : Sep 22, 2023, 12:08 PM IST

ನವದೆಹಲಿ: 'ನಾರಿ ಶಕ್ತಿ ವಂದನ್ ಮಸೂದೆ' ಅಂಗೀಕಾರವಾದ ಹಿನ್ನೆಲೆಯಲ್ಲಿ ರಾಷ್ಟ್ರದೆಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಅದರಲ್ಲೂ ಮಹಿಳಾ ಸಂಸದರು ಪ್ರಧಾನಿ ಮೋದಿ ಪರ ಘೋಷಣೆಗಳನ್ನು ಮೊಳಗಿಸಿ ಹೂಗುಚ್ಚ ನೀಡುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಪಿ.ಟಿ.ಉಷಾ ಮತ್ತು ಕೇಂದ್ರ ಸಚಿವರಾದ ಮೀನಾಕ್ಷಿ ಲೇಖಿ ಮತ್ತು ಸ್ಮೃತಿ ಇರಾನಿ ಸೇರಿದಂತೆ ಉಭಯ ಸದನಗಳ ಮಹಿಳಾ ಸದಸ್ಯರು ಮೋದಿ ಅವರಿಗೆ ಧನ್ಯವಾದ ಸಲ್ಲಿಸಿ ಫೋಟೋ ಕ್ಲಿಕ್ಕಿಸಿಕೊಂಡರು.

ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ವಿಧೇಯಕ ಗುರುವಾರ ರಾಜ್ಯಸಭೆಯಲ್ಲಿ ಅವಿರೋಧವಾಗಿ ಅಂಗೀಕಾರಗೊಂಡಿತು. 214 ಸದಸ್ಯರು ಬೆಂಬಲವಾಗಿ ಮತ ಚಲಾಯಿಸಿದರು. ಮಸೂದೆಯ ವಿರುದ್ಧ ಯಾರೂ ಮತ ಹಾಕದಿರುವುದು ವಿಶೇಷವಾಗಿತ್ತು.

'ನಾರಿ ಶಕ್ತಿ ವಂದನ್ ಮಸೂದೆ' ಮಂಗಳವಾರ ಹೊಸ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಗೊಂಡ ನಂತರ ಸಂಸತ್ತು ಅಂಗೀಕರಿಸಿದ ಮೊದಲ ಮಸೂದೆಯಾಗಿದೆ. ಇದಕ್ಕೂ ಮೊದಲು, ಬುಧವಾರ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದು, ಪರವಾಗಿ 454 ಮತಗಳು ಮತ್ತು 2 ಮತಗಳು ವಿರುದ್ಧವಾಗಿ ಬಿದ್ದಿದ್ದವು. ಮಸೂದೆ ಅಂಗೀಕಾರಕ್ಕೆ ಮಹಿಳಾ ಸಂಸದರು ಸಂತಸ ವ್ಯಕ್ತಪಡಿಸಿದರು.

ಪ್ರತಿಪಕ್ಷಕ್ಕೂ ಧನ್ಯವಾದ-ಶೋಭಾ ಕರಂದ್ಲಾಜೆ:ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, "ಸಂಸತ್ತಿನಲ್ಲಿ ಮಹಿಳೆಯರ ಮೀಸಲಾತಿಗಾಗಿ ನಾವು ಹಲವು ವರ್ಷಗಳಿಂದ ಕಾಯುತ್ತಿದ್ದೆವು. ಇದು ಹಲವು ವರ್ಷಗಳ ಆಶಯವಾಗಿತ್ತು. ಈ ಸಂದರ್ಭದಲ್ಲಿ ನಾನು ಪ್ರತಿಪಕ್ಷಕ್ಕೂ ಧನ್ಯವಾದ ಹೇಳುತ್ತೇನೆ" ಎಂದರು.

ಸಚಿವೆ ದರ್ಶನಾ ಜರ್ದೋಶ್ ಅಭಿನಂದನೆ: ರೈಲ್ವೆ ಖಾತೆ ರಾಜ್ಯ ಸಚಿವೆ ದರ್ಶನಾ ಜರ್ದೋಶ್ ಮಾತನಾಡಿ, "ಇದು ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿಯವರಿಂದ ದೊಡ್ಡ ಕೊಡುಗೆ. ದೇಶದ ಅರ್ಧದಷ್ಟು ಜನಸಂಖ್ಯೆಗೆ ಅವರು ನೀಡಿದ ಗೌರವಕ್ಕಾಗಿ ನಾನು ಧನ್ಯವಾದ ಅರ್ಪಿಸುತ್ತೇನೆ" ಎಂದು ಹೇಳಿದರು.

ಬಿಜೆಪಿ ಸಂಸದೆ ದಿಯಾ ಕುಮಾರಿ ಪ್ರತಿಕ್ರಿಯೆ: "ಈ ಮಸೂದೆ ಅಂಗೀಕಾರದಿಂದ ನಮಗೆ ತುಂಬಾ ಸಂತೋಷವಾಗಿದೆ. ಪ್ರಧಾನಿ ಮೋದಿ ಅಂತಿಮವಾಗಿ ನಮ್ಮ ಕನಸು ನನಸಾಗಿಸಿದ್ದಾರೆ" ಎಂದು ಹೇಳಿದರು.

ಇದನ್ನೂ ಓದಿ:'ಮೋದಿ ಹೇ ತೋ ಮುಮ್ಕಿನ್‌ ಹೇ...': ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಸಚಿವೆ ಸ್ಮೃತಿ ಇರಾನಿ ಮೆಚ್ಚುಗೆ

ABOUT THE AUTHOR

...view details