ಕರ್ನಾಟಕ

karnataka

By

Published : Dec 24, 2020, 7:50 PM IST

Updated : Dec 24, 2020, 8:12 PM IST

ETV Bharat / bharat

370ನೇ ವಿಧಿ ಪುನಃಸ್ಥಾಪನೆಯಾಗುವವರೆಗೂ ವಿಧಾನಸಭೆಗೆ ಸ್ಪರ್ಧಿಸುವುದಿಲ್ಲ: ಒಮರ್ ಅಬ್ದುಲ್ಲಾ

ನ್ಯಾಷನಲ್​​ ಕಾನ್ಫರೆನ್ಸ್​​ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಈಟಿವಿ ಭಾರತ ಜೊತೆ ಮಾತನಾಡುತ್ತ, ರಾಜ್ಯದ ಹಿಂದಿನ ವಿಶೇಷ ಸ್ಥಾನಮಾನವನ್ನು ಪುನಃಸ್ಥಾಪಿಸುವವರೆಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ, ರಾಜಕಾರಣಿಯಾಗಿ ನನ್ನ ಕೆಲಸವನ್ನು ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.

ಒಮರ್ ಅಬ್ದುಲ್ಲಾ
ಒಮರ್ ಅಬ್ದುಲ್ಲಾ

ಶ್ರೀನಗರ: 370ನೇ ವಿಧಿ ಮತ್ತೆ ಬರುವವರೆಗೂ ನಾನು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದ್ರೆ ರಾಜಕೀಯವನ್ನು ತೊರೆಯುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್​​ ಕಾನ್ಫರೆನ್ಸ್​​ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ನ್ಯಾಷನಲ್​​ ಕಾನ್ಫರೆನ್ಸ್​​ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರ ಸಂದರ್ಶನ

ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲರೇಷನ್​​ (ಪಿಎಜಿಡಿ) ಮತ್ತು ನ್ಯಾಷನಲ್​​ ಕಾನ್ಫರೆನ್ಸ್ ಮೊದಲ ಬಾರಿಗೆ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯಲ್ಲಿ ಉತ್ತಮ ಸ್ಥಾನಗಳನ್ನು ಗೆದ್ದಿದೆ. ಈ ಸಂಬಂಧ ಈಟಿವಿ ಭಾರತಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಒಮರ್ ಅಬ್ದುಲ್ಲಾ ಅವರು, ಈ ಫಲಿತಾಂಶವು ಜಮ್ಮು ಮತ್ತು ಕಾಶ್ಮೀರ ಜನತೆ 370 ನೇ ವಿಧಿ ರದ್ದುಗೊಳಿಸುವಿಕೆ ಹಾಗೂ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸುವ ಬಿಜೆಪಿ ಸರ್ಕಾರದ ನಿರ್ಧಾರದ ವಿರುದ್ಧ ಇರುವುದನ್ನು ಸೂಚಿಸುತ್ತದೆ ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಲು ಹಾಗೂ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ 2019 ರ ಅನುಷ್ಠಾನದ ನಂತರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಯಸುತ್ತೀರಾ ಎಂದು ಕೇಳಿದಾಗ, ಒಮರ್ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇರಾದೆ ಇಲ್ಲ ಎಂದು ಹೇಳಿದ್ದಾರೆ.

ಓದಿ:ಕ್ಯಾರೆಟ್​ ತಿನ್ನಿ ಉತ್ತಮ ಆರೋಗ್ಯ ಗಳಿಸಿ: ಇದರಿಂದ ಎಷ್ಟೆಲ್ಲ ಲಾಭಗಳಿವೆ ಎಂದರೆ?

ಡಿಡಿಸಿ ಚುನಾವಣೆಯಲ್ಲಿ ಪಿಎಜಿಡಿ ಪ್ರದರ್ಶನದ ನಂತರ ಬಿಜೆಪಿ ಈಗ ಭಯಭೀತವಾಗಿದೆ. ಮುಂದಿನ ದಿನಗಳಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಭಾಗವಹಿಸುವುದಿಲ್ಲ. ಡಿಡಿಸಿ ಚುನಾವಣೆಯ ಫಲಿತಾಂಶಗಳು ಪಿಎಜಿಡಿಗೆ ಮತ್ತು ವಿಶೇಷವಾಗಿ ಎನ್‌ಸಿಗೆ ಉತ್ತೇಜನಕಾರಿಯಾಗಿದೆ ಎಂದು ಒಮರ್ ಹೇಳಿಕೊಂಡಿದ್ದಾರೆ.

Last Updated : Dec 24, 2020, 8:12 PM IST

ABOUT THE AUTHOR

...view details