ರಾಂಚಿ : ಕುಸ್ತಿ ಚಾಂಪಿಯನ್ಶಿಪ್ ಕಾರ್ಯಕ್ರಮದಲ್ಲಿ ಕುಸ್ತಿ ಅಸೋಸಿಯೇಷನ್ ಆಫ್ ಇಂಡಿಯಾದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಯುವ ಕುಸ್ತಿಪಟುವಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಈ ಕುರಿತಂತೆ ಬಿಸಿ ಬಿಸಿ ಚರ್ಚೆ ಶುರುವಾಗಿದೆ.
ರಾಂಚಿಯ ಖೇಲ್ ವಿಲೇಜ್ನಲ್ಲಿರುವ ಮೆಗಾ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ 15 ವರ್ಷದೊಳಗಿನ ಕುಸ್ತಿಪಟುಗಳಿಗೆ ರಾಷ್ಟ್ರೀಯ ಕುಸ್ತಿ ಚಾಂಪಿಯನ್ಶಿಪ್ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿತ್ತು. ಈ ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳಿಂದ 800ಕ್ಕೂ ಅಧಿಕ ಕುಸ್ತಿಪಟುಗಳು ಪಾಲ್ಗೊಂಡಿದ್ದರು. ಅದರಂತೆ ಸ್ಪರ್ಧೆಯಲ್ಲಿ ಭಾಗವಹಿಸಲು ಉತ್ತರಪ್ರದೇಶದಿಂದ ಯುವ ಕುಸ್ತಿಪಟು ಕೂಡ ಆಗಮಿಸಿದ್ದನು.
ವಯೋಮಿತಿ ಪರಿಶೀಲನೆ ವೇಳೆ ಯುವ ಕುಸ್ತಿಪಟುವಿನ ವಯಸ್ಸು 15 ವರ್ಷಕ್ಕಿಂತ ಮೇಲ್ಪಟ್ಟಿದ್ದು, ತಾಂತ್ರಿಕ ಕಾರಣಗಳಿಂದಾಗಿ ಸ್ಪರ್ಧೆಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲಾಯಿತು. ಇಷ್ಟಕ್ಕೆ ಸಮ್ಮನಾಗದ ಕ್ರೀಡಾಪಟು ಅಧಿಕಾರಿಗಳೊಂದಿಗೆ ಗಂಟೆಗಳ ಕಾಲ ವಾಗ್ವಾದ ನಡೆಸಿ ನಂತರ ನೇರವಾಗಿ ವೇದಿಕೆ ಮೇಲೆ ಹೋಗಿ ಕುಸ್ತಿ ಅಸೋಸಿಯೇಷನ್ ಆಫ್ ಇಂಡಿಯಾದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಬಳಿ ಟೂರ್ನಿಯಲ್ಲಿ ಭಾಗಹಿಸಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿದನು.