ಕರ್ನಾಟಕ

karnataka

ETV Bharat / bharat

ರಕ್ಷಣಾ ಸಚಿವರ ಭೇಟಿಯಾದ CM BSY: ರಾಜ್ಯದ ಸ್ಥಳೀಯ Aerospace ಬಗ್ಗೆ ಸಮಾಲೋಚನೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ರಾಜೀನಾಮೆ ನೀಡುವ ವದಂತಿಗಳ ನಡುವೆ ಸಿಎಂ ಯಡಿಯೂರಪ್ಪ ಶುಕ್ರವಾರ ದೆಹಲಿಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.

By

Published : Jul 17, 2021, 5:03 PM IST

ರಕ್ಷಣಾ ಸಚಿವರ ಭೇಟಿಯಾದ ಸಿಎಂ ಬಿಎಸ್​ವೈ
ರಕ್ಷಣಾ ಸಚಿವರ ಭೇಟಿಯಾದ ಸಿಎಂ ಬಿಎಸ್​ವೈ

ನವದೆಹಲಿ:ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ರಾಜ್ಯದ ಸ್ಥಳೀಯ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನಾ ಪರಿಸರ ವ್ಯವಸ್ಥೆಯ ಬಗ್ಗೆ ಚರ್ಚಿಸಿದರು.

ಇಂದು ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಜತೆ ಸಂತೋಷ ಕೂಟದಲ್ಲಿ ಭಾಗಿಯಾಗಿದ್ದರು. ಕರ್ನಾಟಕದ ಸ್ಥಳೀಯ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನಾ ಪರಿಸರ ವ್ಯವಸ್ಥೆ ಸೇರಿದಂತೆ ವಿವಿಧ ವಿಷಯಗಳ ಕುರಿತು ನಾವು ಮಾತನಾಡಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಯಾವುದೇ ಕಾರಣಕ್ಕೂ ಹಿಂದೆಗೆಯುವುದಿಲ್ಲ, ಪಕ್ಷ ಬಲಪಡಿಸುತ್ತೇನೆ : ಸಿಎಂ ಬಿಎಸ್​ವೈ

ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ರಕ್ಷಣಾ ಮಂತ್ರಿ ರಾಜನಾಥ್‌ಸಿಂಗ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದಾರೆ ಎಂದು ರಕ್ಷಣಾ ಸಚಿವರ ಕಚೇರಿ ಟ್ವೀಟ್ ಮಾಡಿದೆ.

ರಾಜೀನಾಮೆ ನೀಡುವ ವದಂತಿಗಳ ನಡುವೆ ಸಿಎಂ ಯಡಿಯೂರಪ್ಪ ಶುಕ್ರವಾರ ದೆಹಲಿಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ನಾಯಕತ್ವ ಬದಲಾವಣೆಯಂತಹ ಬೆಳವಣಿಗೆಯನ್ನು ಸೂಚಿಸುವ ವದಂತಿಗಳನ್ನು ಅವರು ಬಲವಾಗಿ ನಿರಾಕರಿಸಿದರು.

ABOUT THE AUTHOR

...view details