ಕರ್ನಾಟಕ

karnataka

ETV Bharat / bharat

ಯೋಗಿ ನಾಡಲ್ಲಿ ಇನ್ಮುಂದೆ ದಿನದ 24 ಗಂಟೆಯೂ ಆ್ಯಂಬುಲೆನ್ಸ್ ಲಭ್ಯ : ತಪ್ಪಿದ್ದಲ್ಲಿ ಕಠಿಣ ಕ್ರಮ - ಯೋಗಿ ನಾಡಲ್ಲಿ ಇನ್ಮುಂದೆ ದಿನದ 24 ಗಂಟೆಯೂ ಆಂಬುಲೆನ್ಸ್ ಲಭ್

ಆಯಾ ಜಿಲ್ಲೆಗಳಲ್ಲಿ ಆ್ಯಂಬುಲೆನ್ಸ್ ಕಾರ್ಯಾಚರಣೆಯ ವ್ಯವಸ್ಥೆಗಳ ಬಗ್ಗೆ ನಿರಂತರವಾಗಿ ನಿಗಾ ಇಡುವಂತೆ ಎಲ್ಲಾ ಜಿಲ್ಲಾ ನ್ಯಾಯಾಧೀಶರಿಗೆ ಸೂಚಿಸಲಾಗಿದೆ..

ಯೋಗಿ ನಾಡಲ್ಲಿ ಇನ್ಮುಂದೆ ದಿನದ 24 ಗಂಟೆಯೂ ಆಂಬುಲೆನ್ಸ್ ಲಭ್ಯ: ತಪ್ಪಿದ್ದಲ್ಲಿ ಕಠಿಣ ಕ್ರಮ
ಯೋಗಿ ನಾಡಲ್ಲಿ ಇನ್ಮುಂದೆ ದಿನದ 24 ಗಂಟೆಯೂ ಆಂಬುಲೆನ್ಸ್ ಲಭ್ಯ: ತಪ್ಪಿದ್ದಲ್ಲಿ ಕಠಿಣ ಕ್ರಮ

By

Published : Jul 30, 2021, 5:54 PM IST

ಲಖನೌ: ಕೋವಿಡ್ ಸಾಂಕ್ರಾಮಿಕ ರೋಗದ 3ನೇ ತರಂಗವನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಜಿಲ್ಲೆಗಳಲ್ಲಿ ಆ್ಯಂಬುಲೆನ್ಸ್ ಸೇವೆಗಳ ಸಮಯ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕೋವಿಡ್ ಮೌಲ್ಯಮಾಪನ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಆ್ಯಂಬುಲೆನ್ಸ್ ಲಭ್ಯವಿಲ್ಲದ ಕಾರಣ ಯಾವುದೇ ಹಠಾತ್ ಸಾವು ಸಂಭವಿಸಿದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಸಂದರ್ಭದಲ್ಲೂ ರೋಗಿ ಅಥವಾ ಅವರ ಕುಟುಂಬಗಳು ತೊಂದರೆ ಅನುಭವಿಸಬಾರದು ಎಂದು ಎಚ್ಚರಿಸಿದ್ದಾರೆ.

ಆಯಾ ಜಿಲ್ಲೆಗಳಲ್ಲಿ ಆ್ಯಂಬುಲೆನ್ಸ್ ಕಾರ್ಯಾಚರಣೆಯ ವ್ಯವಸ್ಥೆಗಳ ಬಗ್ಗೆ ನಿರಂತರವಾಗಿ ನಿಗಾ ಇಡುವಂತೆ ಎಲ್ಲಾ ಜಿಲ್ಲಾ ನ್ಯಾಯಾಧೀಶರಿಗೆ ಸೂಚಿಸಲಾಗಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ABOUT THE AUTHOR

...view details