ಕೊಳ್ಳೇಗಾಲ(ಚಾಮರಾಜನಗರ):ಕಾಳಸಂತೆಯಲ್ಲಿ ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.
ಕಾಳಸಂತೆಯಲ್ಲಿ ಅಕ್ರಮ ಆಕ್ಸಿಜನ್ ಸಿಲಿಂಡರ್ ಮಾರಾಟ; ಓರ್ವನ ಬಂಧನ - ಕ್ರಮ ಆಕ್ಸಿಜನ್ ಸಿಲಿಂಡರ್ ಮಾರಾಟ ಓರ್ವನ ಬಂಧನ
ಕೊಳ್ಳೇಗಾಲದಲ್ಲಿ ಅಕ್ರಮವಾಗಿ ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
![ಕಾಳಸಂತೆಯಲ್ಲಿ ಅಕ್ರಮ ಆಕ್ಸಿಜನ್ ಸಿಲಿಂಡರ್ ಮಾರಾಟ; ಓರ್ವನ ಬಂಧನ Kollegal](https://etvbharatimages.akamaized.net/etvbharat/prod-images/768-512-05:54:53:1619958293-kn-cnr-kollegal-oxiygen-cylinder-marata-kac10017-02052021175323-0205f-1619958203-606.jpg)
ನಗರದ ಪೀಸ್ ಪಾರ್ಕ್ ರಸ್ತೆಯ ಸಮೀಪ ನಿವಾಸಿ ಶ್ರೀನಿವಾಸ್ (55) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್ಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ದೂರಿನ ಮೇರೆಗೆ ತಹಶೀಲ್ದಾರ್ ಕುನಾಲ್ ಮಾಹಿತಿ ಆಧರಿಸಿದ ಡಿವೈಎಸ್ಪಿ ನಾಗರಾಜು ಹಾಗೂ ವೃತ್ತ ನಿರೀಕ್ಷಕ ಶಿವರಾಜ್ ಬಿ. ಮುಧೋಳ್ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಲಾಗಿದ್ದು, ಆರೋಪಿ ಶ್ರೀನಿವಾಸ್ ಎಂಬುವನನ್ನು ಬಂಧಿಸಿದ್ದಾರೆ.
ಬಂಧಿತನಿಂದ 12 ಆಕ್ಸಿಜನ್ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ 7 ಖಾಲಿ ಸಿಲಿಂಡರ್ಗಳಾಗಿವೆ. ಸದ್ಯದ ಪರಿಸ್ಥಿತಿಯಲ್ಲಿ ಆಕ್ಸಿಜನ್ಗೆ ಬಹಳ ಬೇಡಿಕೆ ಇರುವುದರಿಂದ ಈತ ಕಾಳಸಂತೆಯಲ್ಲಿ ಗ್ರಾಹಕರಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ರಾಷ್ಟೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಾಗಿದೆ.