ಶಿವಮೊಗ್ಗ: ಭದ್ರಾವತಿ ಕ್ಷೇತ್ರದ ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಲು ನಾನು ವೈಯಕ್ತಿಕ ಹಣವನ್ನು ನೀಡಲು ಸಿದ್ದ ಎಂದು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ತಿಳಿಸಿದ್ದಾರೆ.
ಇಂದು ತಮ್ಮ ಕ್ಷೇತ್ರದ 1 ಕೋಟಿ ರೂ. ಅನುದಾನವನ್ನು ಕೋವಿಡ್ಗಾಗಿಯೇ ನೀಡಿದ್ದಾರೆ. ಇದರಲ್ಲಿ ಭದ್ರಾವತಿಯ ಎಂಪಿಎಂ ಕಲ್ಯಾಣ ಮಂದಿರದಲ್ಲಿ ಜಿಲ್ಲಾಡಳಿತ ಸಹಕಾರದೊಂದಿದೆ 100 ಬೆಡ್ನ ಆಸ್ಪತ್ರೆ ನಿರ್ಮಾಣ ಮಾಡಿದ್ದಾರೆ.
ಕ್ಷೇತ್ರದ ಕೋವಿಡ್ ಸೋಂಕಿತರ ಅನುಕೂಲಕ್ಕಾಗಿ ಎರಡು ಆ್ಯಂಬುಲೆನ್ಸ್ ನೀಡಿದ್ದಾರೆ. ಈ ಬೆಡ್ಗಳು ಸಾಕಾಗದೆ ಇನ್ನೂ 100 ಬೆಡ್ಗಳು ಬೇಕಾದ್ರೆ ಶಾಸಕರ ಅನುದಾನದಲ್ಲಿ ನಿರ್ಮಿಸಿ ಕೊಡುವುದಾಗಿ ತಿಳಿಸಿದರು. ಜೊತೆಗೆ ಬೇರೆ ವ್ಯವಸ್ಥೆಗಳು ಬೇಕು ಅಂದ್ರೆ, ನಾನು ವೈಯಕ್ತಿಕವಾಗಿ ಎಷ್ಟು ಲಕ್ಷ ಹಣ ನೀಡಲು ಸಿದ್ದನಿದ್ದೇನೆ ಎಂದರು.