ಬೀದರ್: ಕಲ್ಬುರ್ಗಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ್ ರಾಮಾಯಣದ ವಿಭೂಷಣನಂತೆ ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರಿದ್ದು ಮೇ 23 ಕ್ಕೆ ಪಟ್ಟಾಭೀಷೇಕ ಆಗೋದು ಗ್ಯಾರಂಟಿ ಎಂದು ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ಹೇಳಿದ್ದಾರೆ.
ಕಲ್ಬುರ್ಗಿ ಜಿಲ್ಲೆ ಚಿಂಚೋಳಿ ವಿಧಾನಸಭೆ ಕ್ಷೇತ್ರದಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ಚುನಾವಣೆ ಪ್ರಚಾರ ಸಮಾವೇಶ ನಿಮಿತ್ತ ಈಟಿವಿ ಭಾರತದೊಂದಿಗೆ ಶಾಸಕ ರಾಜಕುಮಾರ್ ಪಾಟೀಲ್ ಹಾಗೂ ಹುಮನಾಬಾದ್ನ ಮಾಜಿ ಶಾಸಕ ಸುಭಾಷ್ ಕಲ್ಲೂರ ಅವರು ತಮ್ಮ ಮನದಾಳದ ಮಾತುಗಳು ಹಂಚಿಕೊಂಡಿದ್ದಾರೆ.