ಕರ್ನಾಟಕ

karnataka

ETV Bharat / briefs

ಒಂದೇ ಹೋಟೆಲ್​ನಲ್ಲಿ ತಂಗಿದ್ದರೂ ಭೇಟಿಯಾಗದ ಸಿದ್ದು-ಹೆಚ್​ಡಿಕೆ

ಒಂದೇ ಹೋಟೆಲ್​ನಲ್ಲಿ ತಂಗಿದ್ದರೂ ಸಮ್ಮಿಶ್ರ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇರವಾಗಿ ಮಾತನಾಡದಿರುವುದು ಚರ್ಚೆಗೆ ಗ್ರಾಸವಾಗಿದೆ.

By

Published : May 14, 2019, 9:13 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ: ಒಂದೇ ಹೋಟೆಲ್​ನಲ್ಲಿ ತಂಗಿದ್ದರೂ ಸಮ್ಮಿಶ್ರ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇರವಾಗಿ ಮಾತನಾಡದಿರುವುದು ಚರ್ಚೆಗೆ ಗ್ರಾಸವಾಗಿದೆ.

ಸಮ್ಮಿಶ್ರ ಸರ್ಕಾರದಲ್ಲಿನ ಆರೋಪ, ಪ್ರತ್ಯಾರೋಪಗಳು ಸಾರ್ವಜನಿಕ ವಲಯದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿವೆ. ಜೆಡಿಎಸ್​ ರಾಜ್ಯ ಘಟಕದ ಅಧ್ಯಕ್ಷ ಎಚ್​.ವಿಶ್ವನಾಥ ಅವರ ಹೇಳಿಕೆ ಕುರಿತಂತೆ ಸಿದ್ದರಾಮಯ್ಯನವರ ಪ್ರತಿಕ್ರಿಯೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುವುದರ ಜತೆಗೆ ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನದ ಹೊಗೆಯನ್ನು ಎತ್ತಿ ತೋರಿಸುತ್ತಿದೆ. ಮುಖ್ಯಮಂತ್ರಿಗಳ ಜತೆ ನೇರವಾಗಿ ಮಾತನಾಡುವುದನ್ನು ಕರೆ ಮಾಡಿ ಮಾತನಾಡಿದ್ದೇನೆ. ಬೆಳಗ್ಗೆ ಯಾವುದೇ ಮಾತು ಆಡಿಲ್ಲ, ಭೇಟಿಯೂ ಆಗಿಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿ ಕಾರು ಏರಿ ಹೋದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ನನಗೆ ಹುಚ್ಚು ಹಿಡಿದಿದೆ ಎನ್ನುವವರಿಗೆ ಹುಚ್ಚು ಹಿಡಿದಿದೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ABOUT THE AUTHOR

...view details