ಕರ್ನಾಟಕ

karnataka

ಅಥಣಿಯಲ್ಲಿ ಕೊರೊನಾ ಅಬ್ಬರ: ಜನರ ಆರೋಗ್ಯ ರಕ್ಷಣೆಗೆ ಪರದಾಟ

By

Published : May 20, 2021, 11:25 AM IST

ಅಥಣಿಯಲ್ಲಿ ಇದುವರೆಗೂ 1720 ಮಂದಿ ಸೋಂಕಿತರು ಇದ್ದು, 81 ಮಂದಿ ಸಾವನ್ನಪ್ಪಿದ್ದಾರೆ. ದಿನೇ ದಿನೇ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಭಯಭೀತರಾಗಿದ್ದಾರೆ.

Corona
Corona

ಅಥಣಿ: ಕರ್ನಾಟಕದಲ್ಲಿ ಕೊರೊನಾ ಮಹಾಮಾರಿ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದರೂ, ಅಥಣಿಯಲ್ಲಿ ಬಿರುಗಾಳಿ ವೇಗದಲ್ಲಿ ಹರಡುತ್ತಿದೆ. ಹೀಗಾಗಿ ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಪರದಾಡುವಂತಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜನ ಭಯಭೀತರಾಗಿದ್ದಾರೆ. ಅಥಣಿಯಲ್ಲಿ ಇದುವರೆಗೂ 1720 ಮಂದಿ ಸೋಂಕಿತರು ಇದ್ದು, 81 ಮಂದಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ದಾಖಲೆ ತೋರಿಸುತ್ತಿದೆ.

ಅಥಣಿ ತಾಲೂಕಿನಲ್ಲಿ 45 ಗ್ರಾಮ ಪಂಚಾಯಿತಿಯು 68 ಗ್ರಾಮಗಳನ್ನು ಒಳಗೊಂಡಿದ್ದು ಸರಿಸುಮಾರು 7 ಲಕ್ಷ ಸಂಖ್ಯೆ ಹೊಂದಿರುವ ತಾಲೂಕು. ಸದ್ಯ ತಾಲೂಕಿನಲ್ಲಿ ಪ್ರತಿನಿತ್ಯ 100 ಹೆಚ್ಚು ಪ್ರಕರಣಗಳು ಕಂಡುಬರುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಜನರು ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ.

ಸಮುದಾಯದ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿನಿಂದ ಬೆಡ್​ಗಳು ಭರ್ತಿಯಾಗಿ ಅನಿವಾರ್ಯವಾಗಿ ಬಡವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿವಂತಾಗಿದೆ. ಇನ್ನು ಕೆಲವರು ಸೂಕ್ತ ಸಮಯಕ್ಕೆ ಬೆಡ್ ಸಿಗದೆ ಮನೆಯಲ್ಲಿ ಮೃತಪಟ್ಟಿದ್ದಾರೆ.

ಡಿಸಿಎಂ ಲಕ್ಷ್ಮಣ ಸವದಿ ಕಳೆದ ಕೆಲ ದಿನಗಳ ಹಿಂದೆ ಅಥಣಿ ಹೊರವಲಯದಲ್ಲಿ ರಾಣಿ ಚೆನ್ನಮ್ಮ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ನೆರವೇರಿಸಿದರು. ಆದರೆ ಸೋಂಕಿತರು ಮಾತ್ರ ಬೆಡ್ ಸಿಗದೆ ಪರದಾಡುವಂತಾಗಿದೆ. ಸರ್ಕಾರ ಹಾಗೂ ಜನಪ್ರತಿನಿಧಿಗಳು ತಕ್ಷಣವೇ ಎಚ್ಚೆತ್ತುಕೊಂಡ ಕೊಕಟನೂರ ಗ್ರಾಮದಲ್ಲಿ ಕೊರೊನಾ ಚಿಕಿತ್ಸೆ ದವಖಾನೆ ಪ್ರಾರಂಭಿಸುವಂತೆ ಅಥಣಿ ಜನತೆ ಆಗ್ರಹಿಸಿದ್ದಾರೆ.

ತಾಲೂಕಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ:ಕಳೆದ ಒಂದು ತಿಂಗಳಿನಿಂದ ಕೊರೊನಾ ವೈರಸ್ ತಾಲೂಕಿನಲ್ಲಿ ರಣಕೇಕೆ ಮುಂದುವರಿಸಿದೆ. ಆದರೆ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಾಲೂಕಿಗೆ ಭೇಟಿ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದ್ದೆ.

ಕೊರೊನಾ ಉಲ್ಬಣಕ್ಕೆ ಜಿಲ್ಲಾಡಳಿತ ವೈಫಲ್ಯ ಕಾರಣ:

ಮಹಾರಾಷ್ಟ್ರ ಗಡಿಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ಎಲ್ಲಾ ಚಟುವಟಿಕೆಗಳನ್ನು ನಡೆಸಲು ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿದ್ದು, ಕೊರೊನಾ ಹೆಚ್ಚಳಕ್ಕೆ ಕಾರಣ ಎಂದಿದ್ದಾರೆ. ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಕೈಚೆಲ್ಲಿ ಕುಳಿತಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ.

ತಾಲೂಕಿನಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ ಸಮುದಾಯ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರು ಮಾತ್ರ ಇರುವುದರಿಂದ ಸರ್ಕಾರ ಕೂಡಲೇ ಹೆಚ್ಚುವರಿ ವೈದ್ಯರನ್ನು ನೇಮಕ ಮಾಡುವಂತೆ ಜನತೆ ಒತ್ತಾಯಿಸಿದ್ದಾರೆ.

ಅಥಣಿ ತಾಲೂಕಿನಲ್ಲಿ ಒಂದು ದಿನಕ್ಕೆ 100 ಗಡಿದಾಟಿ ಕೊರೊನಾ ಪ್ರಕರಣ ದಾಖಲಾಗುತ್ತಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಅದೆಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರಿಂದಾಗಿ ಸರ್ಕಾರ ಅಥಣಿ ತಾಲೂಕನ್ನು ರೆಡ್ ಜೋನ್ ಎಂದು ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಜನತೆ ಆಗ್ರಹಿಸಿದ್ದಾರೆ.

ABOUT THE AUTHOR

...view details