ಕರ್ನಾಟಕ

karnataka

ETV Bharat / briefs

ಲಂಕಾ ಬಾಂಬ್ ಸ್ಫೋಟ: ರಮೇಶ್ ಗೌಡ ಶವ ಕುಟುಂಬಸ್ಥರಿಗೆ ಹಸ್ತಾಂತರ

ಶ್ರೀಲಂಕಾ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದ ರಮೇಶ್ ಗೌಡ ಮೃತದೇಹವನ್ನು ವೈದ್ಯಕೀಯ ಪರೀಕ್ಷೆಯ ಬಳಿಕ ತುಮಕೂರು ಜಿಲ್ಲಾಸ್ಪತ್ರೆ ವೈದ್ಯರು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

By

Published : Apr 24, 2019, 9:22 PM IST

ರಮೇಶ್ ಬಾಬು ಶವ ಕುಟುಂಬಸ್ಥರಿಗೆ ಹಸ್ತಾಂತರ

ತುಮಕೂರು:ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ತುಮಕೂರಿನ ರಮೇಶ್ ಗೌಡ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಸರಸ್ವತಿಪುರಂನಲ್ಲಿರುವ ಅವರ ನಿವಾಸಕ್ಕೆ ಮೃತದೇಹವನ್ನು ತರಲಾಗಿದ್ದು, ಕೆಲಕಾಲ ಕುಟುಂಬ ಸದಸ್ಯರಿಗೆ ದರ್ಶನಕ್ಕಾಗಿ ಇರಿಸಲಾಗಿತ್ತು. ಈ ವೇಳೆ ಸಚಿವ ಎಸ್. ಆರ್. ಶ್ರೀನಿವಾಸ್ ಮತ್ತು ಮುಖ್ಯಮಂತ್ರಿ ಜಿ. ಪರಮೇಶ್ವರ್, ಜಿಲ್ಲಾಧಿಕಾರಿ ರಾಕೇಶ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿ, ಸಾಂತ್ವನ ಹೇಳಿದರು.

ರಮೇಶ್ ಬಾಬು ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

ಶ್ರೀಲಂಕಾದಲ್ಲಿ ಶವದ ಮರಣೋತ್ತರ ಪರೀಕ್ಷೆ ಮಾಡಲಾಗಿತ್ತು. ನಂತರ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಳೀಯ ವೈದ್ಯರು, ಗಾಯಗೊಂಡು ರಕ್ತಸಿಕ್ತವಾಗಿದ್ದ ರಮೇಶ್ ಗೌಡ ಮೃತದೇಹದ ಬಹುತೇಕ ಭಾಗಕ್ಕೆ ಹೊಲಿಗೆ ಹಾಕಿದರು.

ಕೆಲವು ನಿಯಮಾವಳಿಗಳ ಪ್ರಕಾರ, ರಮೇಶ್ ಗೌಡ ಕುಟುಂಬಕ್ಕೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ಪಟ್ಟಿರುವುದಾಗಿ ಶಾಸಕ ಜ್ಯೋತಿ ಗಣೇಶ್ 'ಈ ಟಿವಿ ಭಾರತ್' ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದಾರೆ.

For All Latest Updates

TAGGED:

tumkur

ABOUT THE AUTHOR

...view details