ತುಮಕೂರು:ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ತುಮಕೂರಿನ ರಮೇಶ್ ಗೌಡ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಸರಸ್ವತಿಪುರಂನಲ್ಲಿರುವ ಅವರ ನಿವಾಸಕ್ಕೆ ಮೃತದೇಹವನ್ನು ತರಲಾಗಿದ್ದು, ಕೆಲಕಾಲ ಕುಟುಂಬ ಸದಸ್ಯರಿಗೆ ದರ್ಶನಕ್ಕಾಗಿ ಇರಿಸಲಾಗಿತ್ತು. ಈ ವೇಳೆ ಸಚಿವ ಎಸ್. ಆರ್. ಶ್ರೀನಿವಾಸ್ ಮತ್ತು ಮುಖ್ಯಮಂತ್ರಿ ಜಿ. ಪರಮೇಶ್ವರ್, ಜಿಲ್ಲಾಧಿಕಾರಿ ರಾಕೇಶ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿ, ಸಾಂತ್ವನ ಹೇಳಿದರು.