ನವದೆಹಲಿ: ಉತ್ತರಪ್ರದೇಶದ ವಾರಣಾಸಿಯಿಂದ ನರೇಂದ್ರ ಮೋದಿ ವಿರುದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕೇಳಿ ಬಂದಿದ್ವು. ಆದರೆ, ಕೊನೆಯ ಕ್ಷಣಗಳಲ್ಲಿ ದಿಢೀರ್ ಆಗಿ ಕೈ ಪಕ್ಷ ಮೋದಿ ವಿರುದ್ಧ ಅಜಯ್ ರೈ ಗೆ ಟಿಕೆಟ್ ನೀಡಿ ಅಚ್ಚರಿ ಮೂಡಿಸಿತ್ತು. ಇದೀಗ ಪ್ರಿಯಾಂಕಾ ಈ ಕ್ಷೇತ್ರದಿಂದ ಕಣಕ್ಕಿಳಿಯದಿರಲು ಕಾರಣ ಏನು ಎಂಬುದನ್ನು ಕಾಂಗ್ರೆಸ್ ಬಹಿರಂಗಪಡಿಸಿದೆ.
ಮೋದಿ ವಿರುದ್ದ ಸ್ಪರ್ಧೆ ಮಾಡದ ಪ್ರಿಯಾಂಕಾ-ಕಾರಣವೇನು ಗೊತ್ತೇ? - ಚುನಾವಣೆ
ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯದಿರಲು ಕಾರಣವೇನು..? ವಾರಣಾಸಿ ಕ್ಷೇತ್ರದಿಂದ ಕಣಕ್ಕಿಳಿಯಬಾರದು ಎಂಬುದು ಅವರ ಸ್ವಂತ ನಿರ್ಧಾರವಾಗಿತ್ತೇ..? ಈ ಬಗ್ಗೆ ಸ್ಯಾಮ್ ಪಿತ್ರೋಡಾ ವಿವರಣೆ ಕೊಟ್ಟರು.
![ಮೋದಿ ವಿರುದ್ದ ಸ್ಪರ್ಧೆ ಮಾಡದ ಪ್ರಿಯಾಂಕಾ-ಕಾರಣವೇನು ಗೊತ್ತೇ?](https://etvbharatimages.akamaized.net/etvbharat/prod-images/768-512-3115988-thumbnail-3x2-priya.jpg)
ಪ್ರಿಯಾಂಕಾ ಗಾಂಧಿ
ಈ ಬಗ್ಗೆ ಮಾತನಾಡಿರುವ ಸ್ಯಾಮ್ ಪಿತ್ರೋಡಾ, ವಾರಣಾಸಿ ಕ್ಷೇತ್ರದಿಂದ ಕಣಕ್ಕಿಳಿಯಬಾರದು ಎಂಬುದು ಪ್ರಿಯಾಂಕ ಗಾಂಧಿಯವರ ಸ್ವಂತ ನಿರ್ಧಾರ. ಅದು ಪಕ್ಷದ ನಿರ್ಧಾರ ಅಲ್ಲ ಎಂದರು. ಈ ಒಂದು ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ, ಉಳಿದ ಕ್ಷೇತ್ರಗಳ ಮೇಲೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕಾಗಿಯೇ ಅವರೇ ಈ ನಿರ್ಧಾರ ಕೈಗೊಂಡಿದ್ದರು. ಮತ್ತು ತಾನು ಎಲ್ಲ ಕ್ಷೇತ್ರದ ಅಭ್ಯರ್ಥಿಗಳ ಗೆಲುವಿಗೆ ತಾವು ಶ್ರಮಿಸುವುದಾಗಿ ತಿಳಿಸಿದರು ಎಂದು ಸ್ಯಾಮ್ ವಿವರಿಸಿದ್ದಾರೆ.
ವಾರಣಾಸಿಯಿಂದ ಈಗಾಗಲೇ ಮೋದಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಮೇ 19ರಂದು ಇಲ್ಲಿ ಮತದಾನ ನಡೆಯಲಿದೆ.