ಕರ್ನಾಟಕ

karnataka

ETV Bharat / briefs

ಇಷ್ಟು ದೊಡ್ಡ ಸೋಲು ನಾನು ನಿರೀಕ್ಷೆ ಮಾಡಿರಲಿಲ್ಲ: ಡಿ.ಕೆ ಶಿವಕುಮಾರ್​ - ಹೀನಾಯ ಸೋಲು

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲೂ ಕಾಂಗ್ರೆಸ್​ ಹೀನಾಯ ಸೋಲು ಕಂಡಿದ್ದು, ಅದೇ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ ಶಿವಕುಮಾರ್​ ಮಾತನಾಡಿದ್ದಾರೆ.

ಡಿಕೆ ಶಿವಕುಮಾರ್​

By

Published : May 28, 2019, 1:31 PM IST

ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಕಂಡಿದ್ದು, ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಪಡೆದಿದೆ.ಇದರಿಂದ ರಾಜ್ಯ ಕಾಂಗ್ರೆಸ್​​ ಮುಖಭಂಗಕ್ಕೊಳಗಾಗಿದ್ದು, ಇದೇ ವಿಷಯವಾಗಿ ಪಕ್ಷದ ಟ್ರಬಲ್ ಶೂಟರ್​ ಡಿಕೆಶಿ ಮಾತನಾಡಿದ್ದಾರೆ.

ಚುನಾವಣಾ ಫಲಿತಾಂಶಕ್ಕೂ ಮುನ್ನ ವಿದೇಶಕ್ಕೆ ಹಾರಿದ್ದ ಡಿಕೆಶಿ ಬೆಂಗಳೂರಿಗೆ ವಾಪಸ್​ ಆಗಿದ್ದು, ಕಾಂಗ್ರೆಸ್​ ಸೋಲಿನ ಬಗ್ಗೆ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

ಕೆಟ್ಟದನ್ನು ಕೇಳಲಾರೆ,ನೋಡಲಾರೆ,ಆಡಲಾರೆ-ಡಿಕೆಶಿ ಪ್ರತಿಕ್ರಿಯೆ!

ಚುನಾವಣೆಯಲ್ಲಿ ಪಕ್ಷ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸೋಲು ಕಾಣುತ್ತದೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ. ಇದೀಗ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದ್ದು, ಪಕ್ಷದ ಮುಖಂಡರನ್ನ ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್​ ಪಕ್ಷ ನಾಶವಾಗಲು ಬಿಡುವುದಿಲ್ಲ. ಗಾಂಧಿ ಕುಟುಂಬ ಸದಾ ಪಕ್ಷದ ಏಳಿಗೆಗಾಗಿ ದುಡಿಯುತ್ತಿದೆ ಎಂದು ತಿಳಿಸಿದರು.

ABOUT THE AUTHOR

...view details