ಕರ್ನಾಟಕ

karnataka

ETV Bharat / briefs

ರಾಜ್ಯದಲ್ಲಿ ಜೆಡಿಎಸ್​ ಎಷ್ಟು ಸ್ಥಾನ ಗೆಲ್ಲುತ್ತದೆ: ಶ್ರೀರಾಮುಲು ಹೇಳಿದ್ದಾರೆ ಕೇಳಿ!

ಮಂಡ್ಯದಲ್ಲಿ ಮಗನಿಗಾದ್ರೂ ಗೆಲ್ಲಿಸಿ, ಮರ್ಯಾದೆ ಉಳಿಸಿಕೊಳ್ಳಬೇಕು ಎಂಬ ಉದ್ದೇಶ ಹೆಚ್​ಡಿ ಕುಮಾರಸ್ವಾಮಿಯವರದ್ದು ಎಂದು ಶ್ರೀರಾಮುಲು ಹೇಳಿದ್ದಾರೆ.

By

Published : Mar 29, 2019, 5:11 AM IST

ಶ್ರೀರಾಮುಲು ಹೇಳಿಕೆ

ಶಿವಮೊಗ್ಗ: ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದರ ಮಧ್ಯೆ ರಾಜಕೀಯ ನಾಯಕರ ಕೇಸರೇರಚಾಟ ಜೋರಾಗಿದೆ. ಇದೀಗ ಭಾರತೀಯ ಜನತಾ ಪಕ್ಷದ ಮುಖಂಡ ಶ್ರೀರಾಮುಲು ಮಾತನಾಡಿದ್ದಾರೆ.

ರಾಜ್ಯದಲ್ಲಿ ಜೆಡಿಎಸ್​ ಎಷ್ಟು ಸ್ಥಾನ ಗೆಲ್ಲುತ್ತದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ರಾಮುಲು, ಜೆಡಿಎಸ್ ಒಂದೇ ಒಂದು ಸ್ಥಾನ ಗೆಲ್ಲುವುದು ಕೂಡ ಕಠಿಣವಾಗಿದೆ ಎಂದಿದ್ದಾರೆ.

ಶ್ರೀರಾಮುಲು ಮಾತು

ಗುಪ್ತಚರ ಮಾಹಿತಿ ಪ್ರಕಾರ, ಜೆಡಿಎಸ್ ಒಂದು ಸ್ಥಾನವನ್ನು ಗೆಲ್ಲುವುದಿಲ್ಲ. ಹೀಗಾಗಿ ಜೆಡಿಎಸ್​​ ಮುಖಂಡರು ಬೇರೆ ಯಾವುದೇ ಕ್ಷೇತ್ರಕ್ಕೆ ಹೋಗದೆ ಮಂಡ್ಯ, ತುಮಕೂರು, ಹಾಸನದಲ್ಲಿ ಮಾತ್ರ ಪ್ರಚಾರ ನಡೆಸುತ್ತಿದ್ದಾರೆ.ಕಾರಣ ಇಷ್ಟೇ ಮೂರು ಕ್ಷೇತ್ರವನ್ನಾದರೂ ಗೆಲ್ಲುವ ಮೂಲಕ ಮರ್ಯಾದೆ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಮಂಡ್ಯದಲ್ಲಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಸೋಲುತ್ತಾರೆ, ಹಾಗೆ ತುಮಕೂರಿನಲ್ಲಿ ದೇವೇಗೌಡರು ಸೋಲುತ್ತಾರೆ, ಹಾಸನದಲ್ಲಿ ಪ್ರಜ್ವಲ್ ಸೋಲುತ್ತಾರೆ ಎಂದು ಭವಿಷ್ಯ ನುಡಿದ ಶ್ರೀರಾಮುಲು, ಪ್ರಚಾರಕ್ಕೆ ಡಿ.ಕೆ ಶಿವಕುಮಾರ್ ಬರುತ್ತಾರಂತೆ ಎನ್ನುವ ಪ್ರಶ್ನೆಗೆ ಉತ್ತರಿಸಿದರು. ಡಿ.ಕೆ ಶಿವಕುಮಾರ್ ಜನರಿಗಾಗಿ ಏನು ಸಾಧನೆ ಮಾಡಿದ್ದಾರೆ. ಅವರ ಸಾಧನೆ ಏನು ಇಲ್ಲ ಇರುವುದೊಂದೇ ದುಡ್ಡು. ಬಂದರೆ ದುಡ್ಡು ಖರ್ಚು ಮಾಡುತ್ತಾರೆ ಎಂಬ ಕಾರಣಕ್ಕೆ ಪ್ರಚಾರಕ್ಕೆ ಕರೆಯುತ್ತಾರೆ ಬಿಟ್ಟು ಬೇರೆ ಯಾವುದೇ ಉದ್ದೇಶವಿಲ್ಲ ಎಂದಿದ್ದಾರೆ.

ABOUT THE AUTHOR

...view details