ಕರ್ನಾಟಕ

karnataka

By

Published : Jun 6, 2019, 9:17 AM IST

ETV Bharat / briefs

ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕರೂರು ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ತಿಪ್ಪೇಶ ವಡ್ಲವರ್ (46) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರೈತ ತಿಪ್ಪೇಶ ವಡ್ಲವರ್

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕರೂರು ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ರೈತ ತಿಪ್ಪೇಶ ವಡ್ಲವರ್
ತಿಪ್ಪೇಶ ವಡ್ಲವರ್ (46) ಎಂಬಾತನೇ ಆತ್ಮಹತ್ಯೆಗೆ ಶರಣಾದ ರೈತನಾಗಿದ್ದು, 2 ಎಕರೆ ಜಮೀನು ಹೊಂದಿದ್ದ. ಕೈ ಸಾಲ, ಬ್ಯಾಂಕ್ ಸಾಲ ಎಂದು ₹5 ಲಕ್ಷ ಸಾಲ ಮಾಡಿದ್ದ ಎನ್ನಲಾಗಿದೆ.

ಕೊಳವೆ ಬಾವಿಯಲ್ಲಿ ನೀರು ಬತ್ತಿದ್ದರಿಂದ ಬೇಸತ್ತ ತಿಪ್ಪೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ABOUT THE AUTHOR

...view details