ಕರ್ನಾಟಕ

karnataka

ETV Bharat / briefs

ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅಥಣಿ ಶಾಸಕ ಮಹೇಶ್ ಕುಮಠಳ್ಳಿ - Athani drinking water problem

ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಇಲಾಖೆಯಿಂದ ಅನುದಾನ ಮಂಜೂರಾಗಿದೆ. ಜನರ ಮೂಲ ಸೌಕರ್ಯಕ್ಕೆ ರಾಜ್ಯ ಸರ್ಕಾರದಿಂದ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

Mahesh Kumaratalli performs land worship for various works
Mahesh Kumaratalli performs land worship for various works

By

Published : Jun 14, 2020, 3:08 PM IST

ಅಥಣಿ :ಶಿವಯೋಗಿ ನಗರಕ್ಕೆ ಗ್ರಾಮೀಣ ನಿವಾಸಿಗಳಿಗೆ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯೀಕರಣ ಇಲಾಖೆಯಿಂದ 4 ಲಕ್ಷ ರೂ. ವೆಚ್ಚದ 1.2 ಕಿ.ಮೀ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಅಥಣಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ ಭೂಮಿ ಪೂಜೆ ನೆರವೇರಿಸಿದರು.

ಇದೇ ವೇಳೆ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಕೈಗೊಂಡು ತ್ವರಿತಗತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಇಲಾಖೆಯಿಂದ ಅನುದಾನ ಮಂಜೂರಾಗಿದೆ. ಜನರ ಮೂಲ ಸೌಕರ್ಯಕ್ಕೆ ರಾಜ್ಯ ಸರ್ಕಾರದಿಂದ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ABOUT THE AUTHOR

...view details