ಕರ್ನಾಟಕ

karnataka

By

Published : May 28, 2021, 7:38 PM IST

Updated : May 28, 2021, 8:29 PM IST

ETV Bharat / briefs

ಪಕ್ಷದಲ್ಲಿನ ಬೆಳವಣಿಗೆ ಆತಂಕ ಉಂಟು ಮಾಡಿದೆ; ಸಿ.ಟಿ. ರವಿ

ಸಿಎಂ ಬದಲಾವಣೆ ಮಾಡಬೇಕು ಎಂಬ ಕೂಗು ಹೆಚ್ಚಾಗತೊಡಗುತ್ತಿದ್ದಂತೆ ಇಂದು ನಳಿನ್ ಕುಮಾರ್ ಕಟೀಲ್ ಜೊತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಾತುಕತೆ ನಡೆಸಿದ್ದಾರೆ.

Our party should not go against our wishes: CT Ravi
Our party should not go against our wishes: CT Ravi

ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ ರಹಸ್ಯ ಮಾತುಕತೆ ನಡೆಸಿದ ಬಳಿಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.

ನಮ್ಮ ಪಕ್ಷಕ್ಕೆ ಸಾವಿರಾರು ಜನರ ತಪಸ್ಸು, ಪರಿಶ್ರಮವಿದೆ. ಎಲ್ಲರ ಪರಿಶ್ರಮದ ಫಲವಾಗಿ ಅಧಿಕಾರದಲ್ಲಿದ್ದೇವೆ. ನಮ್ಮ ಆದ್ಯತೆ ಜನರ ಹಿತ ಕಾಯೋದು. ಇತ್ತೀಚಿನ ಕೆಲವು ಬೆಳವಣಿಗೆ ನಮಗೆ ಕಳವಳ ಉಂಟು ಮಾಡಿದೆ. ಆ ನಿಟ್ಟಿನಲ್ಲಿ ಯಾಕೆ ಹೀಗೆ ಆಗುತ್ತಿದೆ ಎಂಬ ಬಗ್ಗೆ ಇಬ್ಬರಿಗೂ ಆತಂಕವಿದೆ ಎಂದರು.

ಪಕ್ಷದಲ್ಲಿನ ಬೆಳವಣಿಗೆ ಆತಂಕ ಉಂಟು ಮಾಡಿದೆ; ಸಿ.ಟಿ. ರವಿ

ಯಾರದ್ದೋ ಪರಿಶ್ರಮದಿಂದ ಕಷ್ಟಪಟ್ಟು ಕಟ್ಟಿರುವ ಪಕ್ಷ. ನಮ್ಮ ಆಶಯಗಳಿಗೆ ವಿರುದ್ಧ ಹೋಗಬಾರದು. ಆ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದೇವೆ. ನಾವಿಬ್ಬರೇ ನಿರ್ಣಯ ಕೈಗೊಳ್ಳಲು ಆಗುವುದಿಲ್ಲ. ಪಕ್ಷದ ಹಿರಿಯರಿದ್ದಾರೆ, ಕೋರ್ ಕಮಿಟಿ ಇದೆ. ಅವರ ಜೊತೆ ಸಮಾಲೋಚನೆ ನಡೆಸಿ ಏನು ಮಾಡಬೇಕು ಅದನ್ನ ಮಾಡ್ತೇವೆ ಎಂದಿದ್ದಾರೆ.

Last Updated : May 28, 2021, 8:29 PM IST

ABOUT THE AUTHOR

...view details