ಕರ್ನಾಟಕ

karnataka

ETV Bharat / briefs

ಬೆಂಗಳೂರಿನಲ್ಲಿ 5 ದಿನಗಳ ಹಿಂದೆಯಷ್ಟೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್​​ ಕೊಲೆ

5 ದಿನಗಳ ಹಿಂದೆಯಷ್ಟೇ ಜೈಲಿನಿಂದ ಹೊರಬಂದಿದ್ದ 20 ವರ್ಷದ ರೌಡಿಶೀಟರ್​ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

By

Published : Apr 13, 2019, 5:18 AM IST

rowdy-sheeter

ಬೆಂಗಳೂರು: 5 ದಿನಗಳ ಹಿಂದೆಯಷ್ಟೇ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್​ನೊಬ್ಬನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹನುಮಂತನಗರದ ಕಾಳಿದಾಸ ಸರ್ಕಲ್ ಬಳಿ ನಡೆದಿದೆ.

ಭರತ್( 20) ಎಂಬಾತನೆ ಕೊಲೆಯಾದ ರೌಡಿಶೀಟರ್. ಈತ ಹನುಮಂತನಗರದ ಕಾಳಿದಾಸ ಸರ್ಕಲ್ ಬಳಿ ರಾತ್ರಿ 9 ಗಂಟೆ ವೇಳೆ ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆಮಾಡಿ ಪರಾರಿಯಾಗಿದ್ದಾರೆ.

ಹಳೇ ದ್ವೇಷದ ಹಿನ್ನೆಲೆ ಭರತ್​ನನ್ನ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಹನುಮಂತನಗರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಅಣ್ಣಾಮಲೈ ತಿಳಿಸಿದ್ದಾರೆ.

ABOUT THE AUTHOR

...view details