ಕರ್ನಾಟಕ

karnataka

ETV Bharat / briefs

ಕೊರೊನಾ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕ್ರಮ: ಎಸ್​ಪಿ ರಿಷ್ಯಂತ್​ - ಮೈಸೂರಿನಲ್ಲಿ ಕೊರೊನಾ ವೈರಸ್

ಬೈಲಕುಪ್ಪೆಯಲ್ಲಿ ಟಿಬೆಟಿಯನ್​ ನೆಲೆಸಿ ವರ್ಷಗಳೇ ಕಳೆದಿವೆ. ಅವರೊಂದಿಗೆ ಸಂವಹಿಸಿದರೆ ಕೊರೊನಾ ವೈರಸ್ ಹರಡುತ್ತದೆ ಎಂಬ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

SP Rishyant to take action against false news about coronavirus
ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್

By

Published : Mar 15, 2020, 7:12 PM IST

Updated : Mar 15, 2020, 8:54 PM IST

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಟಿಬೆಟಿಯನ್ ಕ್ಯಾಂಪ್​ಗೆ ಚೀನಾದಿಂದ ಬರುವ ವ್ಯಕ್ತಿಗಳಿದ್ದಾರೆ. ಅವರಿಂದ ಕೊರೊನಾ ವೈರಸ್ ಹರಡುತ್ತಿದೆ ಎಂಬ ಸುಳ್ಳು ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಎಚ್ಚರಿಸಿದ್ದಾರೆ.

ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್

ಬೈಲಕುಪ್ಪೆಯಲ್ಲಿ ಟಿಬೆಟಿಯನ್​ ನೆಲೆಸಿ ವರ್ಷಗಳೇ ಕಳೆದಿವೆ. ಅವರೊಂದಿಗೆ ಸಂವಹಿಸಿದರೆ ಕೊರೊನಾ ವೈರಸ್ ಹರಡುತ್ತದೆ ಎಂಬ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಮಾಡಿದರು.

ನಂಜನಗೂಡು ದೊಡ್ಡಜಾತ್ರೆಗೆ ಕೆಲವೇ ದಿನಗಳು ಬಾಕಿ ಇದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಮಾಹಿತಿ ನೀಡಲಿದ್ದಾರೆ ಎಂದರು.

Last Updated : Mar 15, 2020, 8:54 PM IST

ABOUT THE AUTHOR

...view details