ಕರ್ನಾಟಕ

karnataka

ಎಸ್ಎಸ್ಎಲ್‌ಸಿ ಪರೀಕ್ಷೆ ಹಿನ್ನೆಲೆ.. ಚನ್ನರಾಯಪಟ್ಟಣದ ಪರೀಕ್ಷಾ ಕೇಂದ್ರಗಳಿಗೆ ಔಷಧಿ ಸಿಂಪಡಣೆ

ಎಸ್ಎಸ್ಎಲ್‌ಸಿ ಪರೀಕ್ಷೆಗೆ ಕೆಲವು ದಿನಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಈಗಾಗಲೇ ಶಿಕ್ಷಣ ಇಲಾಖೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ..

By

Published : Jun 22, 2020, 5:47 PM IST

Published : Jun 22, 2020, 5:47 PM IST

Sslc exam center sanitization in channarayapattana
Sslc exam center sanitization in channarayapattana

ಚನ್ನರಾಯಪಟ್ಟಣ :ಜೂನ್‌ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ಕೋವಿಡ್-19 ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಪರೀಕ್ಷಾ ಕೇಂದ್ರಗಳಿಗೆ ಹೈಪೋಕ್ಲೋರೈಟ್ ಸೊಲ್ಯೂಷನ್ ಸಿಂಪಡಿಸಲಾಯಿತು.

ಎಸ್ಎಸ್ಎಲ್‌ಸಿ ಪರೀಕ್ಷೆಗೆ ಕೆಲವು ದಿನಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಈಗಾಗಲೇ ಶಿಕ್ಷಣ ಇಲಾಖೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಇವತ್ತಿನಿಂದ ಔಷಧಿ ಸಿಂಪಡಿಸುವ ಕಾರ್ಯಕ್ಕೆ ಮುಂದಾಗಿದೆ.

ಪುರಸಭೆ ಮತ್ತು ಶಿಕ್ಷಣ ಇಲಾಖೆ ಸೇರಿ ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂಬ ಕಾರಣಕ್ಕೆ ಮುಂಜಾಗ್ರತವಾಗಿ ಔಷಧಿ ಸಿಂಪಡಿಸುತ್ತಿದ್ದಾರೆ.

ABOUT THE AUTHOR

...view details