ನವದೆಹಲಿ:ಕಿರ್ಲೋಸ್ಕರ್ ಸಂಸ್ಥೆಗೆ ವಂಚನೆ ಪ್ರಕರಣ ಸಂಬಂಧ ಉದ್ಯಮಿ ಅನಿಲ್ ಅಂಬಾನಿಗೆ ಸುಪ್ರೀಂ ಕೋರ್ಟ್ ಹೊರಡಿಸಿದ್ದ ನಿರ್ದೇಶನದ ಆದೇಶವನ್ನು ತಿರುಚುತ್ತಿದ್ದ ಪರಮೋಚ್ಛ ನ್ಯಾಯಾಲಯದ ಇಬ್ಬರು ಸಿಬ್ಬಂದಿಯನ್ನು ವಜಾಗೊಳಿಸಿದ್ದು, ಪೊಲೀಸರು ಬಂಧಿಸಿದ್ದಾರೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಕೋರ್ಟ್ಗೆ ಖುದ್ದು ಹಾಜರಾಗಬೇಕಿತ್ತು. ಈ ಕುರಿತು ಸುಪ್ರೀಂ ಕೋರ್ಟ್ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಹೊರಡಿಸಿದ್ದ ಆದೇಶವನ್ನು ತಿರುಚಲಾಗಿತ್ತು. ತಪ್ಪುಗಳನ್ನು ಮೂರು ದಿನಗಳ ನಂತರ ತಿದ್ದುಪಡಿ ಮಾಡಲಾಗಿದೆ ಎಂದು ತಿಳಿದುಬಂದಿದೆ.