ಹೈದರಾಬಾದ್: ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ಪ್ರಮುಖ ಪಾತ್ರ ವಹಿಸುತ್ತದೆ. ಒಳರೋಗಿಗಳ ಸೇವಾ ಕ್ಷೇತ್ರದಲ್ಲಿ ಇದು ನಿರ್ಣಾಯಕ ಪಾತ್ರ ಹೊಂದಿದೆ ಎಂದು ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲ ಹೇಳಿದರು.
ಹೈದರಾಬಾದ್ನಲ್ಲಿ ನಡೆದ ಬಯೋ ಏಷ್ಯಾ ಶೃಂಗಸಭೆಯಲ್ಲಿ ತೆಲಂಗಾಣ ಐಟಿ ಸಚಿವ ಕೆಟಿಆರ್ ಅವರ ಜತೆ ವರ್ಚುಯಲ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ಪ್ರಮುಖ ಪಾತ್ರ ವಹಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಒಳರೋಗಿಗಳ ವಲಯಕ್ಕೆ ಹೆಚ್ಚು ಉಪಯುಕ್ತವಾಗಲಿದೆ. ಕಡಿಮೆ ವೆಚ್ಚದ ವೈದ್ಯಕೀಯ ಸೇವೆಗಳನ್ನು ಒದಗಿಸುವ ಗುರಿಯತ್ತ ಸರ್ಕಾರ ಕೆಲಸ ಮಾಡುತ್ತಿದೆ ಎಂದು ತೆಲಂಗಾಣ ಸರ್ಕಾರವನ್ನು ಶ್ಲಾಘಿಸಿದರು.