ನವದೆಹಲಿ:ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರದ ಸಾಂಕ್ರಾಮಿಕ ಯುದ್ಧದಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಮತ್ತು ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರು ಭಾರತಕ್ಕೆ ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದ್ದಾರೆ.
ಭಾರತದಲ್ಲಿ ಹದಗೆಡುತ್ತಿರುವ ಕೋವಿಡ್ ಬಿಕ್ಕಟ್ಟನ್ನು ನೋಡಿ ಆತಂಕ ವ್ಯಕ್ತಪಡಿಸಿದ್ದಾರೆ. ಗೂಗಲ್ ಮತ್ತು ಗೂಗ್ಲರ್ಗಳು 135 ಕೋಟಿ ರೂ. ಗಿವ್ಇಂಡಿಯಾ, ಯುನಿಸೆಫ್ನ ವೈದ್ಯಕೀಯ ಸರಬರಾಜು, ಹೆಚ್ಚಿನ ಸಮುದಾಯಗಳನ್ನು ಬೆಂಬಲಿಸಲು ಮತ್ತು ನಿರ್ಣಾಯಕ ಮಾಹಿತಿ ಹಬ್ಬಿಸುವ ಮೂಲಕ ನೆರವಾಗಲು ಅನುದಾನ ನೀಡಲಾಗುತ್ತಿದೆ ಎಂದು ಪಿಚೈ ಟ್ವೀಟ್ ಮಾಡಿದ್ದಾರೆ.