ಮುಂಬೈ:ದೇಶಾದ್ಯಂತ ಆಮ್ಲಜನಕದ ಕೊರತೆಯ ಬಗ್ಗೆ ಹೆಚ್ಚುತ್ತಿರುವ ಆತಂಕಗಳ ನಡುವೆ ಪ್ರಮುಖ ಕಾರು ತಯಾರಕ ಮಾರುತಿ ಸುಜುಕಿ ಒಂದು ನಿರ್ಣಾಯಕ ನಿರ್ಧಾರ ತೆಗೆದುಕೊಂಡಿದೆ.
ಹರಿಯಾಣದಲ್ಲಿನ ತನ್ನ ಎಲ್ಲ ಕಾರ್ಖಾನೆಗಳನ್ನು ಮುಚ್ಚಲು ನಿರ್ಧರಿಸಿದೆ. ತಾನು ಹೊಂದಿರುವ ಆಕ್ಸಿಜನ್ ಅನ್ನು ವೈದ್ಯಕೀಯ ಉದ್ದೇಶಗಳಿಗೆ ವರ್ಗಾಯಿಸಲಿದೆ. ನಿರ್ವಹಣೆ ಚಟುವಟಿಕೆಗಳಿಗಾಗಿ ಮಾರುತಿ ಕಾರ್ಖಾನೆಗಳು ಸಾಮಾನ್ಯವಾಗಿ ವರ್ಷಕ್ಕೆ ಎರಡು ಬಾರಿ ಕೆಲವು ದಿನಗಳವರೆಗೆ ಮುಚ್ಚುತ್ತದೆ. ಈಗ ಕೊರೊನಾ ಸಂಕಷ್ಟದಲ್ಲಿ ದೇಶಕ್ಕೆ ನೆರವಾಗಲು ತಯಾರಿಕೆಯನ್ನು ಸ್ಥಗಿತಗೊಳಿಸುತ್ತಿದೆ.