ಕರ್ನಾಟಕ

karnataka

ETV Bharat / business

ಪಿಎಂಸಿ ಬ್ಯಾಂಕ್ ಹಗರಣಕ್ಕೆ 4ನೇ ಬಲಿ: ಶಸ್ತ್ರಚಿಕಿತ್ಸೆಗೆ ಹಣ ಹಿಂಪಡೆಯಲಾಗದೇ ವೃದ್ಧ ಸಾವು

ಮುಂಬೈನ ಮುಲುಂದ್​ ನಿವಾಸಿ ಮುರುಳೀಧರ್​ ಧಾರಾ (80) ಎಂಬುವರು ಮೃತಪಟ್ಟಿದ್ದಾರೆ. ಹೃದಯಘಾತ ಸಂಭವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮುರುಳೀಧರ್ ಅವರಿಗೆ ಸಕಾಲದಲ್ಲಿ ಚಿಕಿತ್ಸೆಗೆ ಹಣ ಹೊಂದಿಸಲು ಆಗಲಿಲ್ಲ. ಪಿಎಂಸಿ ಬ್ಯಾಂಕ್​ನಲ್ಲಿ ಹಣ ಠೇವಣಿ ಇರಿಸಿದ್ದರೂ ಅದನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ, ಚಿಕಿತ್ಸೆಗೆ ಹಣ ನೀಡಲಾಗದೆ ನನ್ನ ತಂದೆ ಮೃತಪಟ್ಟಿದ್ದಾರೆ ಎಂದು ಮೃತರ ಮಗ ಆರೋಪಿಸಿದ್ದಾರೆ.

By

Published : Oct 18, 2019, 10:40 PM IST

ಸಾಂದರ್ಭಿಕ ಚಿತ್ರ

ಮುಂಬೈ: ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್​ ಲಿಮಿಟೆಟ್​ (ಪಿಎಂಸಿ) ಹಗರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಮುಂಬೈನ ಮುಲುಂದ್​ ನಿವಾಸಿ ಮುರುಳೀಧರ್​ ಧಾರಾ (80) ಎಂಬುವರು ಮೃತಪಟ್ಟಿದ್ದಾರೆ. ಹೃದಯಘಾತ ಸಂಭವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮುರುಳೀಧರ್ ಅವರಿಗೆ ಸಕಾಲದಲ್ಲಿ ಚಿಕಿತ್ಸೆಗೆ ಹಣ ಹೊಂದಿಸಲು ಆಗಿರಲಿಲ್ಲ. ಪಿಎಂಸಿ ಬ್ಯಾಂಕ್​ನಲ್ಲಿ ಹಣ ಠೇವಣಿ ಇರಿಸಿದ್ದರೂ ಅದನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ, ಚಿಕಿತ್ಸೆಗೆ ಹಣ ನೀಡಲಾಗದೆ ನನ್ನ ತಂದೆ ಮೃತಪಟ್ಟಿದ್ದಾರೆ ಎಂದು ಮೃತರ ಪುತ್ರ ಆರೋಪಿಸಿದ್ದಾರೆ.

ದೀರ್ಘಕಾಲದವರೆಗೆ ಅಸ್ವಸ್ಥರಾಗಿದ್ದು, ವೈದ್ಯರು ಬೈಪಾಸ್ ಶಸ್ತ್ರಚಿಕಿತ್ಸೆ ಮಾಡುವ ತಯಾರಿ ನಡೆಸಿದ್ದರು. ಆರ್​ಬಿಐ ಪಿಎಂಸಿಯಿಂದ ಹಣ ಹಿಂಪಡೆಯಲು ನಿರ್ಬಂಧ ಹೇರಿದ ನಂತರ ಹಣ ಮರಳಿ ಪಡೆಯಲು ಸಾಧ್ಯವಾಗಲಿಲ್ಲ. ಎರಡು ದಿನಗಳ ಹಿಂದೆಯಷ್ಟೇ 90 ಲಕ್ಷ ರೂ. ಬ್ಯಾಂಕ್​ನಲ್ಲಿ ಠೇವಣಿ ಇಟ್ಟಿದ್ದ ಪಿಎಂಸಿ ಬ್ಯಾಂಕ್​ ಖಾತೆದಾರರೊಬ್ಬರು ಪ್ರತಿಭಟನೆಯಲ್ಲಿ ಭಾಗವಹಿಸಿ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದರು.

ABOUT THE AUTHOR

...view details