ನವದೆಹಲಿ :ಕೊರೊನಾ ವೈರಸ್ ಮಧ್ಯೆ ಉತ್ಪಾದನೆ ಮತ್ತು ಸೇವಾ ಕ್ಷೇತ್ರದ ವೇಗ ಸ್ಥಗಿತಗೊಂಡಾಗ ಕೃಷಿ ಕ್ಷೇತ್ರದ ಬಲವನ್ನು ಭಾರತದಲ್ಲಿ ಬೇಸಾಯ ಹಾಗೂ ಅದರ ಸಂಬಂಧಿತ ಕ್ಷೇತ್ರಗಳು ವೇಗ ಪಡೆದುಕೊಳ್ಳಲು ಕಾರಣವಾಗಿವೆ.
ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಹೆಚ್ಚಿನ ಜನಸಂಖ್ಯೆಯನ್ನು ಸರ್ಕಾರ ಗಮನ ಹರಿಸಿತ್ತು. ಕೃಷಿ ಕ್ಷೇತ್ರದಲ್ಲಿ ಸುಧಾರಣೆಯ ಅಲೆ ತರಲು ಹೊಸ ಕಾನೂನುಗಳನ್ನು ಜಾರಿಗೆ ತಂದಿತು. ಈ ಕೃಷಿ ಸುಧಾರಣೆಯ ಬಗ್ಗೆ ವ್ಯಾಜ್ಯಗಳು ನಡೆಯುತ್ತಿರುವ ಮಧ್ಯೆ 2021-22ರ ಬಜೆಟ್ನ ಸೋಮವಾರ ಸಂಸತ್ತಿನಲ್ಲಿ ಮಂಡನೆಯಾಗಲಿದೆ.
ಕೊರೊನಾದಂತಹ ಪರಿಸ್ಥಿತಿಯಲ್ಲಿ ಗ್ರಾಮಗಳು, ಬಡವರು ಮತ್ತು ರೈತರ ಪ್ರಗತಿಗೆ ಆದ್ಯತೆ ನೀಡುವುದಾಗಿ ಹೇಳಿರುವ ಮೋದಿ ಸರ್ಕಾರ, ಮುಂಬರುವ ಮುಂಗಡ ಲೆಕ್ಕಪತ್ರದಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ನಿರೀಕ್ಷೆ ಇರಿಸಿಕೊಳ್ಳಲಾಗಿದೆ.
ಆರ್ಥಿಕ ಪರಿಶೀಲನೆ 2020-21ರ ಪ್ರಕಾರ, ಕೈಗಾರಿಕಾ ಮತ್ತು ಸೇವಾ ವಲಯಗಳು ಕ್ರಮವಾಗಿ ಶೇ.9.6ರಷ್ಟು ಮತ್ತು ಶೇ.8.8ರಷ್ಟು ಕುಸಿಯುವ ನಿರೀಕ್ಷೆಯಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ಬೆಳವಣಿಗೆಯ ದರವು ಶೇ.3.4ರಷ್ಟಿದೆ. ಕೃಷಿ ಮತ್ತು ಈ ಸಂಬಂಧಿತ ವಲಯಗಳು 2020-21ರ ಹಣಕಾಸು ವರ್ಷದಲ್ಲಿ (ಮೊದಲ ಮುಂಗಡ ಅಂದಾಜು) ಸ್ಥಿರ ಬೆಲೆಯಲ್ಲಿ ಶೇ. 3.4ರಷ್ಟು ಬೆಳವಣಿಗೆ ದಾಖಲಿಸಿದೆ.
2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವುದು ಮತ್ತು ದೇಶದ ಎಲ್ಲ ಬಡವರಿಗೆ 'ಪಕ್ಕಾ' ಮನೆ ಸೇರಿದಂತೆ ಗ್ರಾಮಗಳಲ್ಲಿ ಮೂಲ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವುದು ಮೋದಿ ಸರ್ಕಾರದ ಆದ್ಯತೆಯಾಗಿದೆ. ಆದ್ದರಿಂದ, ಈ ಗುರಿ ಸಾಧಿಸುವ ಉದ್ದೇಶದಿಂದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ವಲಯದ ಯೋಜನೆಗಳಿಗೆ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಸಿಗಲಿದೆ ಎಂದು ನಿರೀಕ್ಷಿಸಬಹುದು.
ಪ್ರಧಾನಿ ಕಿಸಾನ್ ಸಮ್ಮನ್ ನಿಧಿ (ಪಿಎಂ-ಕಿಸಾನ್) ಸೇರಿದಂತೆ ಕೃಷಿ ಕ್ಷೇತ್ರದ ಎಲ್ಲಾ ಯೋಜನೆಗಳ ಬಗ್ಗೆ ರೈತರ ಜಾಗೃತಿ ಹೆಚ್ಚುತ್ತಿದೆ. ಈ ಯೋಜನೆಗಳ ಪ್ರಯೋಜನಗಳ ಪ್ರಗತಿ ಸ್ಪಷ್ಟವಾಗಿ ಕಾಣುತ್ತಿವೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈತರಿಗೆ ಕೈಗೆಟುಕುವ ಬಡ್ಡಿದರದಲ್ಲಿ ಅಲ್ಪಾವಧಿಯ ಕೃಷಿ ಸಾಲ ನೀಡುವ ಯೋಜನೆಯ ಬಗ್ಗೆಯೂ ಸರ್ಕಾರ ಗಮನ ಹರಿಸಲಿದೆ.