ನವದೆಹಲಿ: ಕೇಂದ್ರ ಸರ್ಕಾರ ಐದು ನದಿಗಳ ಜೋಡಣೆಗೆ ಮುಂದಾಗಿದ್ದು, ಇದರಲ್ಲಿ ಕಾವೇರಿ - ಪೆನ್ನಾರ್ ನದಿ ಜೋಡಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಗೋದಾವರಿ - ಕೃಷ್ಣಾ ನದಿ ಜೋಡಣೆಯೂ ಇದರಲ್ಲಿ ಸೇರಿದೆ ಎಂದು ಬಜೆಟ್ ಮಂಡನೆ ವೇಳೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಪೆನ್ನಾರ್ ನದಿ ದಕ್ಷಿಣ ಭಾರತದ ನದಿಗಳಲ್ಲೊಂದಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಗಳಲ್ಲಿ ಉಗಮಿಸುವ ಇದು ಆಂಧ್ರ ಪ್ರದೇಶದ ಮೂಲಕ ಹರಿದು ಬಂಗಾಳ ಕೊಲ್ಲಿ ಸೇರುತ್ತದೆ.