ನವದೆಹಲಿ:ಹಲವು ಸುತ್ತಿನ ಹಗ್ಗಜಗ್ಗಾಟದ ನಡುವೆ ಜಾರಿಗೆ ಬಂದ 'ಒಂದು ದೇಶ ಒಂದು ತೆರಿಗೆ' ವ್ಯವಸ್ಥೆಯ 'ಸರಕು ಮತ್ತು ಸೇವಾ ತೆರಿಗೆ'ಗೆ (ಜಿಎಸ್ಟಿ) ನಾಳೆಯ ಜುಲೈ 1ಕ್ಕೆ ಎರಡು ವರ್ಷ ಪೂರೈಸಲಿದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ವ್ಯವಸ್ಥೆಯಾದ ಜಿಎಸ್ಟಿ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಹಣಕಾಸು ಸಚಿವಾಲಯ 'ಜಿಎಸ್ಟಿ ದಿನ'ವೆಂದು ಆಚರಿಸಲಿದೆ. ಅಂಬೇಡ್ಕರ್ ಭವನದಲ್ಲಿ ಕೇಂದ್ರ ಹಾಗೂ ರಾಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಈ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದು, ಈ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯ ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಹಲವು ವಿತ್ತೀಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.