ನವದೆಹಲಿ:ಸಾಲಗಾರರಿಗೆ ಮಧ್ಯಂತರ ಪರಿಹಾರ ನೀಡಿದ ಸುಪ್ರೀಂಕೋರ್ಟ್, ಆಗಸ್ಟ್ 31ರವರೆಗೆ ಡೀಫಾಲ್ಟ್ (ಬೇಪಾವತಿ) ಆಗಿರದ ಸಾಲದ ಖಾತೆಗಳನ್ನು ಮುಂದಿನ ಆದೇಶದವರೆಗೆ ಅನುತ್ಪಾದಕ ಆಸ್ತಿ (ಎನ್ಪಿಎ) ಎಂದು ಘೋಷಿಸದಂತೆ ಬ್ಯಾಂಕ್ಗಳಿಗೆ ನಿರ್ದೇಶನ ನೀಡಿತ್ತು. ತನ್ನ ಮಧ್ಯಂತರ ಆದೇಶ ತೆರವುಗೊಳಿಸುವಂತೆ ಆರ್ಬಿಐ, ನ್ಯಾಯಾಲಯಕ್ಕೆ ಒತ್ತಾಯಿಸಿದೆ.
ಕೋವಿಡ್-19 ಸಾಂಕ್ರಾಮಿಕ ಪರಿಣಾಮದಿಂದಾಗಿ ತೊಂದರೆಗಳನ್ನು ಎದುರಿಸಿ ಒತ್ತಡಕ್ಕೊಳಗಾದ ಸಾಲಗಾರರಿಗೆ ಪರಿಹಾರವಾಗಿ, ಸುಪ್ರೀಂಕೋರ್ಟ್ ಸೆಪ್ಟೆಂಬರ್ 3ರಂದು ಮಧ್ಯಂತರ ಆದೇಶ ಹೊರಡಿಸಿತ್ತು.