ಕರ್ನಾಟಕ

karnataka

ETV Bharat / business

ಮೆಗಾ ಬ್ಯಾಂಕ್​ ವಿಲೀನ ವಿರೋಧಿಸಿ ನಾಳೆ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ

ಓರಿಯಂಟಲ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಯುನೈಟೆಡ್ ಬ್ಯಾಂಕ್, ಯೂನಿಯನ್ ಬ್ಯಾಂಕ್, ಆಂಧ್ರ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್ ಹಾಗೂ ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್​ಗಳನ್ನು ನಾಲ್ಕು ಹಂತದಲ್ಲಿ ವಿಲೀನಗೊಳಿಸುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದರು.

By

Published : Aug 30, 2019, 9:04 PM IST

ಸಾಂದರ್ಭಿಕ ಚಿತ್ರ

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್​ಗಳ ಬಲ ಪಡಿಸಲು ಮತ್ತೊಂದು ಸುತ್ತಿನ ಬ್ಯಾಂಕ್​ಗಳ ರಾಷ್ಟ್ರೀಕರಣಗೊಳಿಸುವುದಾಗಿ ಘೋಷಿಸಿದ ಕೇಂದ್ರದ ನಡೆಯನ್ನು ವಿರೋಧಿಸಿ ಅಖೆಲ ಭಾರತ ಬ್ಯಾಂಕ್​ ನೌಕರರ ಸಂಘಟನೆ (ಎಐಬಿಇಎ) ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.

ಓರಿಯಂಟಲ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಯುನೈಟೆಡ್ ಬ್ಯಾಂಕ್, ಯೂನಿಯನ್ ಬ್ಯಾಂಕ್, ಆಂಧ್ರ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್ ಹಾಗೂ
ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್​ಗಳನ್ನು ನಾಲ್ಕು ಹಂತದಲ್ಲಿ ವಿಲೀನಗೊಳಿಸುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದರು.

ಈ ಬಗ್ಗೆ ಮಾತನಾಡಿದ ಎಐಬಿಇಎ ಮುಖ್ಯಸ್ಥ ಚಿ.ಎಚ್​. ವೆಂಕಟಾಲಯಂ ಅವರು, ಭಾರತದಲ್ಲಿ ಮೆಗಾ ಬ್ಯಾಂಕಿಂಗ್​ ಹಾಗೂ ದೊಡ್ಡ ವಿಲೀನದ ಅಗತ್ಯವಿಲ್ಲ. ನಮ್ಮದು ವಿಶಾಲವಾದ ರಾಷ್ಟ್ರವಾಗಿದ್ದು, ಲಕ್ಷಾಂತರ ಹಳ್ಳಿಗಳಲ್ಲಿ ಈಗಲೂ ಬ್ಯಾಂಕ್​ಗಳಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಬ್ಯಾಂಕ್​ ವಿಲೀನ ಬೇಕಾಗಿಲ್ಲ. ಇದನ್ನು ವಿರೋಧಿಸಿ ನಾಳೆ (ಶನಿವಾರ) ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.

ABOUT THE AUTHOR

...view details