ಕರ್ನಾಟಕ

karnataka

ETV Bharat / city

ಧರ್ಮಕ್ಕೆ ಸಂಕಷ್ಟ ಬಂದಾಗ ತಲ್ವಾರ್ ಹಿಡಿಯಬೇಕು.. ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ - ಹೈದರಾಬಾದ್‌ನ ಬಿಜೆಪಿ ಶಾಸಕ ರಾಜಾಸಿಂಗ್ ಠಾಕೂರ್

ಧರ್ಮಕ್ಕೆ ಸಂಕಟ ಬಂದಾಗ ಸರ್ಕಾರ ಮುಂದೆ ಬರಲ್ಲ. ನೀವೇ ಮುಂದೆ ಬರಬೇಕು. ಧರ್ಮಕ್ಕೆ ಸಂಕಷ್ಟ ಬಂದಾಗ ನೀವೇ ಕೈಯಲ್ಲಿ ತಲ್ವಾರ್ ಹಿಡಿದು ಹೊರ ಬರಬೇಕು ಎಂದು ಹೈದರಾಬಾದ್‌ನ ಭಾಗ್ಯನಗರ ಬಿಜೆಪಿ ಶಾಸಕ ರಾಜಾಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ..

rajasingh Takur Controversial statement
ಹೈದರಾಬಾದ್‌ನ ಬಿಜೆಪಿ ಶಾಸಕ ರಾಜಾಸಿಂಗ್ ಠಾಕೂರ್

By

Published : Dec 26, 2021, 5:28 PM IST

Updated : Dec 27, 2021, 6:03 AM IST

ಬೆಳಗಾವಿ: ಧರ್ಮಕ್ಕೆ ಸಂಕಷ್ಟ ಬಂದಾಗ ಪ್ರತಿಯೊಬ್ಬ ತಲ್ವಾರ್ ಹಿಡಿದು ಹೊರ ಬರಬೇಕು ಎಂದು ಹೈದರಾಬಾದ್‌ನ ಭಾಗ್ಯನಗರ ಬಿಜೆಪಿ ಶಾಸಕ ರಾಜಾಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿ ತಾಲೂಕಿನ ಗಣೇಶ್ ಭಾಗ್‌ನಲ್ಲಿ ಹಿಂದೂಪರ ಕಾರ್ಯಕರ್ತರ ಸ್ನೇಹಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾನು ನಿಮಗೆ ಒಂದು ಕೆಲಸ ಒಪ್ಪಿಸಲು ಬಯಸುತ್ತೇನೆ. ದೇಶ, ಧರ್ಮದ ಸಲುವಾಗಿ ಸಂಘಟಿತರಾಗಿ ಕೆಲಸ ಮಾಡಬೇಕು. ದೇಶದಲ್ಲಿ ಮೋದಿ ಸರ್ಕಾರ ಇದೆ. ಕರ್ನಾಟಕದಲ್ಲೂ ಬಿಜೆಪಿ ಸರ್ಕಾರ ಇದೆ. ಆದ್ರೆ, ಧರ್ಮಕ್ಕೆ ಸಂಕಟ ಬಂದಾಗ ಸರ್ಕಾರ ಮುಂದೆ ಬರಲ್ಲ. ನೀವೇ ಮುಂದೆ ಬರಬೇಕು. ಧರ್ಮಕ್ಕೆ ಸಂಕಷ್ಟ ಬಂದಾಗ ನೀವೇ ಕೈಯಲ್ಲಿ ತಲ್ವಾರ್ ಹಿಡಿದು ಹೊರ ಬರಬೇಕು.

ನಮ್ಮ ಹಿಂದೂಗಳನ್ನು ಮತಾಂತರ ಮಾಡುವ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಪ್ರತಿ ಗ್ರಾಮದಲ್ಲೊಂದು ಸೇನೆ ನಿರ್ಮಿಸುವುದಾಗಿ ಹಿಂದೂ ಕಾರ್ಯಕರ್ತರು ಸಂಕಲ್ಪ ಮಾಡಬೇಕು. ಮತಾಂತರ ತಡೆಯಲು ಈ ಸೇನೆ ಕಾರ್ಯಪ್ರವೃತ್ತರಾಗಬೇಕು. ಎಲ್ಲೆಡೆ ಈಗ ಹಣ ನೀಡಿ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ಸಿಗರು ದೇಶದ್ರೋಹಿಗಳು :ದೇಶದಿಂದ ತೊಲಗುವಾಗ ಬ್ರಿಟಿಷರು ಈ ಕಾಂಗ್ರೆಸ್ ಪಕ್ಷದವರನ್ನು ಬಿಟ್ಟು ಹೋಗಿದ್ದಾರೆ. ಕಾಂಗ್ರೆಸ್ಸಿಗರು ದೇಶದ್ರೋಹಿಗಳು. ಹಿಂದೂ ಹಿಂದೂಗಳ ಮಧ್ಯೆ, ಭಾಷೆಗಳ ಮಧ್ಯೆ ಜಗಳ ಹಚ್ಚಲು ಷಡ್ಯಂತ್ರ ನಡೆಯುತ್ತಿದೆ. ಬೆಳಗಾವಿ ಪುಣ್ಯ, ವೀರಭೂಮಿಯ ನೆಲ. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿದರು. ಈಗಲೂ ಕೆಲವರು ನಮ್ಮ ನಮ್ಮ ಮಧ್ಯೆ ಜಗಳ ಹಚ್ಚಲು ಯತ್ನಿಸುತ್ತಿದ್ದಾರೆ. ಕನ್ನಡಿಗ ಮರಾಠಿಗರ ಮಧ್ಯೆ ಜಗಳ ಹಚ್ಚಲು ಷಡ್ಯಂತ್ರ ನಡೆಯುತ್ತಿದೆ. ಇದನ್ನು ಪ್ರತಿಯೊಬ್ಬರೂ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು.

ಧರ್ಮಕ್ಕೆ ಸಂಕಷ್ಟ ಬಂದಾಗ ತಲ್ವಾರ್ ಹಿಡಿಯಬೇಕು.. ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಕಾಂಗ್ರೆಸ್ಸಿಗರಿಂದಲೇ ಟಿಪ್ಪು ಜಯಂತಿ :ಬಿಜೆಪಿ ಸರ್ಕಾರ ಬಂದರೆ ಟಿಪ್ಪು ಜಯಂತಿ ಬ್ಯಾನ್ ಮಾಡಲಾಗುತ್ತದೆ. ಅದೇ ದೇಶದ್ರೋಹಿಗಳ ಸರ್ಕಾರ ಬಂದಾಗ ಟಿಪ್ಪು ಜಯಂತಿ ಆಚರಿಸಲಾಗುತ್ತದೆ. ಟಿಪ್ಪು ಸುಲ್ತಾನ್ ಹಿಂದೂಗಳ ಹಂತಕನಾಗಿದ್ದ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇರಳದಲ್ಲಿ 600ಕ್ಕೂ ಹೆಚ್ಚು ಜನರ ಹತ್ಯೆ :ಕೇರಳದಲ್ಲಿ 600ಕ್ಕೂ ಹೆಚ್ಚು ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕರ್ತರ ಹತ್ಯೆ ಮಾಡಲಾಗಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯಿಂದ ಈ ಕೃತ್ಯ ನಡೆದಿದೆ. ಪಿಎಫ್‌ಐ ಡೇಂಜರಸ್ ಸಂಘಟನೆ ಎಂದು ದೂರಿದರು.

ಭಾಷಾ ಸೌಹಾರ್ದಕ್ಕೆ ಧಕ್ಕೆ :ಬೆಳಗಾವಿಯಲ್ಲಿ ಕನ್ನಡಿಗರು-ಮರಾಠಿಗರ ಮಧ್ಯೆ ಜಗಳ ಹಚ್ಚಲು ಕೆಲವರು ಷಡ್ಯಂತ್ರ ಮಾಡುತ್ತಿದ್ದಾರೆ. ಹೊಡೆಯುವವನೂ ಹಿಂದು ಆಗಿರಬೇಕು, ಹೊಡಿಸಿಕೊಳ್ಳವವನೂ ಕೂಡ ಹಿಂದು ಆಗಿರಬೇಕು ಎಂದು ಷಡ್ಯಂತ್ರ ಮಾಡಲಾಗುತ್ತಿದೆ. ಛತ್ರಪತಿ ಶಿವಾಜಿ ಮಹಾರಾಜರು ತಲ್ವಾರ್ ಹಿಡಿಯದಿದ್ರೆ ನಾವು ಹಿಂದೂಗಳಾಗಿ ಇರುತ್ತಿರಲಿಲ್ಲ. ಮತಾಂತರ ನಿಷೇಧ ಕಾಯ್ದೆ ಜಾರಿ ತರುತ್ತಿರುವ ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ಹೇಳುವೆ.

ಕರ್ನಾಟಕದಲ್ಲಿ ಇರುವ ಮದರಸಾಗಳನ್ನು ಬ್ಯಾನ್ ಮಾಡುವಂತೆ ನಾನು ಆಗ್ರಹಿಸುವೆ. ಮದರಸಾಗಳಲ್ಲಿ ಉಗ್ರರ ಉತ್ಪಾದನೆ ಆಗುತ್ತದೆ. ಇದನ್ನು ನಾನು ಹೇಳುತ್ತಿಲ್ಲ, ಉತ್ತರ ಪ್ರದೇಶ ಶಾಸಕರು, ಐಬಿ ಅಧಿಕಾರಿಗಳೇ ಹೇಳಿದ್ದಾರೆ. ಅಸ್ಸೋಂ ಸಿಎಂ ಮಾಡಿದಂತೆ ಕರ್ನಾಟಕದಲ್ಲಿಯೂ ಆ ಕಾರ್ಯ ನಡೆಯಬೇಕಿದೆ. ಕರ್ನಾಟಕದಿಂದ ಈ ಕಾರ್ಯಕ್ರಮ ಆರಂಭವಾದ್ರೆ ಇವರ ಅಂತ್ಯ ಶುರುವಾಗಲಿದೆ.

ಇದನ್ನೂ ಓದಿ:ಕನ್ನಡಪರ ಸಂಘಟನೆಗಳಿಂದ ಧರಣಿ.. ಕರ್ನಾಟಕ ಬಂದ್​​ ಬೆಂಬಲಿಸುವಂತೆ ಮನವಿ

Last Updated : Dec 27, 2021, 6:03 AM IST

ABOUT THE AUTHOR

...view details