ಕರ್ನಾಟಕ

karnataka

ETV Bharat / city

ಮಂಗಳೂರಲ್ಲಿ ಬಾಂಬ್ ನಿಷ್ಕ್ರಿಯ: ಪೊಲೀಸರ ಸಾಮರ್ಥ್ಯ ಪ್ರಶಂಸಿದ ಡಿಸಿಎಂ ಸವದಿ - ಮಂಗಳೂರು ಬಾಂಗ್​ ಕುರಿತು ಲಕ್ಷ್ಮಣ ಸವದಿ ಹೇಳಿಕೆ

ಯಾವುದೇ ಸಂಶಯಾಸ್ಪದ ಸಂಗತಿ ಅಥವಾ ನಡವಳಿಕೆಗಳು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಿ ನೆರವಾಗಬೇಕು ಎಂದು ನಾನು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

bomb-fund-the-strength-of-the-police-is-appreciated-by-dcm-lakshman-savadi
ಡಿಸಿಎಂ ಲಕ್ಷ್ಮಣ ಸವದಿ

By

Published : Jan 21, 2020, 6:11 PM IST

ಚಿಕ್ಕೋಡಿ :ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಹಚ್ಚಿ ಅದನ್ನು ನಿಷ್ಕ್ರಿಯಗೊಳಿಸುವ ಮೂಲಕ ಹಲವಾರು ಅಮಾಯಕರ ಸಾವು ನೋವುಗಳನ್ನು ತಡೆದ ಕೀರ್ತಿ ನಮ್ಮ ರಾಜ್ಯದ ಪೊಲೀಸ್ ಇಲಾಖೆಗೆ ಸಲ್ಲುತ್ತದೆ. ಪೊಲೀಸ್ ಇಲಾಖೆಯ ಸಾಮರ್ಥ್ಯದ ಬಗ್ಗೆ ನನಗೆ ಹೆಮ್ಮೆ ಅನಿಸುತ್ತಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಶಾಂತಿಪ್ರಿಯರ ನಾಡು. ಭಯೋತ್ಪಾದನೆ ಅಥವಾ ದುಷ್ಕೃತ್ಯ ನಡೆಸುವ ಕೆಲ ವಿಚ್ಛಿದ್ರಕಾರಿ ಶಕ್ತಿಗಳ ಆಟ ನಮ್ಮ ಸರ್ಕಾರ ಮತ್ತು ಸಮರ್ಥ ಪೊಲೀಸರ ಎದುರು ನಡೆಯುವುದಿಲ್ಲ ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ಪ್ರತಿಭಟನೆಯ ನೆಪದಲ್ಲಿ ಶಾಂತಿ ಕದಡುವ ಮತ್ತು ದಂಗೆ ಹಿಂಸಾಕೃತ್ಯ ನಡೆಸುವ ಪ್ರಯತ್ನ ನಡೆದಾಗಲೂ ಇದೇ ಪೊಲೀಸರು ತಮ್ಮ ಮೇಲಿನ ದಾಳಿ ಲೆಕ್ಕಿಸದೆ ಪರಿಸ್ಥಿತಿ ಹತೋಟಿಯಲ್ಲಿಟ್ಟು ಸಾರ್ವಜನಿಕರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು ಎಂಬುದನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ.

ಡಿಸಿಎಂ ಸವದಿಯಿಂದ ಪೊಲೀಸರ ಸಾಮರ್ಥ್ಯಕ್ಕೆ ಪ್ರಶಂಸೆ!

ಈ ರೀತಿಯ ಸಮಾಜದ್ರೋಹಿಗಳ ಒತ್ತಡಕ್ಕೆ ನಮ್ಮ ರಾಜ್ಯ ಮತ್ತು ಕೇಂದ್ರ ಸರ್ಕಾರ ಯಾವತ್ತೂ ಮಣಿಯುವುದಿಲ್ಲ. ಅಪರಾಧಿಗಳು ಎಷ್ಟೇ ಕುತಂತ್ರ ನಡೆಸಿದರೂ ಅವರನ್ನು ಬಲೆ ಹಾಕುವ ತನಕ ನಾವು ವಿಶ್ರಮಿಸುವುದಿಲ್ಲ. ಮಂಗಳೂರಿನ ಘಟನೆಯ ಹಿಂದಿರುವ ಶಂಕಿತ ಆರೋಪಿಯ ಕುರಿತು ಈಗಾಗಲೇ ಸಾಕಷ್ಟು ಮಾಹಿತಿಯನ್ನೂ ಪೊಲೀಸರು ಸಂಗ್ರಹಿಸಿದ್ದಾರೆ. ಸದ್ಯದಲ್ಲಿಯೇ ಆತನನ್ನು ಸದೆಬಡೆಯುವಲ್ಲಿ ನಮ್ಮ ಪೊಲೀಸರು ಯಶಸ್ವಿಯಾಗುತ್ತಾರೆ ಎಂಬ ವಿಶ್ವಾಸವೂ ನನಗಿದೆ.

ಯಾವುದೇ ಸಂಶಯಾಸ್ಪದ ಸಂಗತಿ ಅಥವಾ ನಡವಳಿಕೆಗಳು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಿ ನೆರವಾಗಬೇಕು ಎಂದು ನಾನು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details