ಬೆಳಗಾವಿ: ಸುಪ್ರಸಿದ್ಧ ಸವದತ್ತಿ ರೇಣುಕಾದೇವಿ ದರ್ಶನ ಮಾಡಿಸಲು ವ್ಯಕ್ತಿಯೊಬ್ಬ 200 ರೂ. ಲಂಚ ಪಡೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರ ಎದುರೇ ಹಗಲು ದರೋಡೆ ನಡೆಯುತ್ತಿದ್ದರೂ ಖಾಕಿ ಮಾತ್ರ ಜಾಣಮೌನ ವಹಿಸಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಜಿಲ್ಲೆ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕೊರೊನಾ ಹಿನ್ನೆಲೆ ಅಕ್ಟೋಬರ್ 31ರವರೆಗೆ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಇಂದಿನಿಂದ ಅ.25 ರವರೆಗೆ ನವರಾತ್ರಿ ಉತ್ಸವ ಹಿನ್ನೆಲೆಯಲ್ಲಿ ಯಲ್ಲಮ್ಮ ದೇವಿ ದರ್ಶನಕ್ಕೆ ಭಕ್ತರ ದಂಡು ಆಗಮಿಸುತ್ತಿದೆ. ಕೊರೊನಾ ಮಾರ್ಗಸೂಚಿ ಅನ್ವಯ ಸರಳ ನವರಾತ್ರಿ ಉತ್ಸವಕ್ಕೆ ಜಿಲ್ಲಾಡಳಿತ ನಿರ್ಧರಿಸಿದೆ.