ಕರ್ನಾಟಕ

karnataka

ETV Bharat / city

ವರದಕ್ಷಿಣೆ ಕಿರುಕುಳ: ಪತಿಯಿಂದ ಪತ್ನಿಯ ಕೊಲೆ ಆರೋಪ

ವರದಕ್ಷಿಣೆ ತಂದಿಲ್ಲವೆಂಬ ಕಾರಣಕ್ಕೆ ಪತ್ನಿಯನ್ನೇ ಹೊಡೆದು ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ನಡೆದಿದ್ದು, ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By

Published : Aug 31, 2019, 2:45 PM IST

ಪತ್ನಿಯನ್ನೇ ಕೊಲೆಗೈದ ಪಾಪಿ ಪತಿ

ಬೆಳಗಾವಿ: ವರದಕ್ಷಿಣೆ ತಂದಿಲ್ಲವೆಂಬ ಕಾರಣಕ್ಕೆ ಪತ್ನಿಯನ್ನೇ ಹೊಡೆದು ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮೀ ಅಂಗಡಿ ( 20 ) ಕೊಲೆಯಾದ ದುರ್ದೈವಿ. ಎರಡು ವರ್ಷಗಳ ಹಿಂದೆ ಲಕ್ಷ್ಮೀ ಬಸವರಾಜ್ ಎನ್ನುವವರನ್ನು ಮದುವೆಯಾಗಿದ್ದರು. ವರದಕ್ಷಿಣೆ ತಂದಿಲ್ಲವೆಂದು‌ ಕಳೆದ ಹಲವು ದಿನಗಳಿಂದ ಪತಿಯ ಕಡೆಯವರು ನಿರಂತರ ‌ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಲಕ್ಷ್ಮೀಯನ್ನು ಹೊಡೆದು ಸಾಯಿಸಿ, ನಂತರ ಬಾಯಿಯಲ್ಲಿ ವಿಷ ಹಾಕಲಾಗಿದೆ. ಇದು ಕೊಲೆ ಅಲ್ಲ, ಆತ್ಮಹತ್ಯೆ ಎಂದು ಬಿಂಬಿಸಲು ಪತಿ ಬಸವರಾಜ್ ಅಂಗಡಿ ಮತ್ತು ಕುಟುಂಬಸ್ಥರು ಈ ಪ್ಲ್ಯಾನ್ ಮಾಡಿದ್ದಾರೆ ಎಂದು ಲಕ್ಷ್ಮೀ ಕಡೆಯವರು ಆರೋಪ‌ ಮಾಡಿದ್ದಾರೆ.

ಈ ಕುರಿತು ನಂದಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details