ಕರ್ನಾಟಕ

karnataka

ETV Bharat / city

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವಿವಿ ಸ್ಥಾಪನೆ: ಸಚಿವ ಅಶ್ವತ್ಥನಾರಾಯಣ - Karnataka Higher Education

ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿ.ವಿ.ಗಳನ್ನು ಸ್ಥಾಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ನಡೆದ 'ಜ್ಞಾನಯಜ್ಞ ಫೆಲೋಶಿಪ್ ವಿತರಣೆ ಮತ್ತು ವಿದ್ಯುನ್ಮಾನ ಪ್ರಮಾಣ ಪತ್ರಗಳ ಸೇವಾ ವ್ಯವಸ್ಥೆ ಹಾಗೂ ಟ್ರ್ಯಾಕಿಂಗ್ ವ್ಯವಸ್ಥೆ' ಉದ್ಘಾಟಿಸಿ ಹೇಳಿದರು.

Ashwath Narayan
ಅಶ್ವತ್ಥನಾರಾಯಣ

By

Published : Dec 16, 2021, 7:01 AM IST

ಬೆಳಗಾವಿ: ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿವಿ ಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಲೆ ಎತ್ತಲಿರುವ ಈ ವಿವಿ ಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಆವರಣದಲ್ಲಿ ಬುಧವಾರ ನಡೆದ 'ಜ್ಞಾನಯಜ್ಞ ಫೆಲೋಶಿಪ್ ವಿತರಣೆ ಮತ್ತು ವಿದ್ಯುನ್ಮಾನ ಪ್ರಮಾಣ ಪತ್ರಗಳ ಸೇವಾ ವ್ಯವಸ್ಥೆ (ಎಲೆಕ್ಟ್ರಾನಿಕ್ ಡಾಕ್ಯುಮೆಂಟರಿ ಡೆಲಿವರಿ) ಹಾಗೂ ಟ್ರ್ಯಾಕಿಂಗ್ ವ್ಯವಸ್ಥೆ' ಉದ್ಘಾಟಿಸಿ ಮಾತನಾಡಿದ ಅವರು, ನೂರಾರು ಎಕರೆ ವಿಶಾಲವಾದ ಕ್ಯಾಂಪಸ್​ಗಳು ಈಗ ಅಪ್ರಸ್ತುತವಾಗುತ್ತಿವೆ. ಆಧುನಿಕ ತಂತ್ರಜ್ಞಾನವು ಸಮರ್ಥವಾಗಿದ್ದು, ತುಂಬಾ ಕಡಿಮೆ ಜಾಗದಲ್ಲಿ ವಿವಿಗಳನ್ನು ಸ್ಥಾಪಿಸಲು ಸಾಧ್ಯವಿದೆ. ದೊಡ್ಡದೊಡ್ಡ ವಿವಿ ಗಳನ್ನು ಆರಂಭಿಸುವ ಬದಲು ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲೂ ವಿಶ್ವವಿದ್ಯಾಲಯಗಳು ಇರುವಂತೆ ನೋಡಿಕೊಳ್ಳುವುದಕ್ಕೆ ಸರ್ಕಾರ ಆದ್ಯತೆ ಕೊಟ್ಟಿದೆ ಎಂದು ನುಡಿದರು.

ಬೆಂಗಳೂರಿನಲ್ಲಿರುವ ಯೂನಿವರ್ಸಿಟಿ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್ ಅನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ 10 ವರ್ಷಗಳ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು.

120 ಎಕರೆ ವಿಶಾಲವಾಗಿರುವ ಬೆಳಗಾವಿಯ ವಿವಿಯು ಕೂಡ ಐಐಟಿ ಮಾದರಿಯಲ್ಲೇ ಬೆಳೆಯಬೇಕು. ಈ ನಿಟ್ಟಿನಲ್ಲಿ ಕುಲಪತಿ ಪ್ರೊ.ಕರಿಸಿದ್ಧಪ್ಪನವರು ಇನ್ನು ಒಂದು ತಿಂಗಳಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿ, ಸರ್ಕಾರಕ್ಕೆ ಸಲ್ಲಿಸಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ABOUT THE AUTHOR

...view details