ಕರ್ನಾಟಕ

karnataka

ETV Bharat / city

ಬೆಳಗಾವಿ ಅಧಿವೇಶನ ಒಂದು ವಾರ ವಿಸ್ತರಿಸಿ: ಸಿಎಂ, ಸ್ಪೀಕರ್​​ಗೆ ಸಿದ್ದರಾಮಯ್ಯ ಒತ್ತಾಯ - Siddaramaiah urges extend Belagavi Session

ಪ್ರವಾಹ, ಅತಿವೃಷ್ಟಿ, ಉತ್ತರ ಕರ್ನಾಟಕದ ನೀರಾವರಿ ವಿಷಯಗಳು, ಕೃಷಿ ಬಿಕ್ಕಟ್ಟುಗಳು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದ ಸಮಸ್ಯೆಗಳು, ಯುವಜನರನ್ನು ಕಾಡುತ್ತಿರುವ ನಿರುದ್ಯೋಗ, ಪ್ರಾದೇಶಿಕ ಅಸಮಾನತೆ ವಿಷಯಗಳನ್ನು ಚರ್ಚಿಸಬೇಕಾಗಿದೆ. ಹೀಗಾಗಿ ಬೆಳಗಾವಿ ಅಧಿವೇಶನವನ್ನು ಒಂದು ವಾರ ಮುಂದುವರಿಸಲು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Siddaramaiah
ಸಿದ್ದರಾಮಯ್ಯ

By

Published : Dec 20, 2021, 7:52 PM IST

ಬೆಳಗಾವಿ: ಸ್ಪೀಕರ್ ಕಾಗೇರಿ ಹಾಗೂ ಸಿಎಂ ಬೊಮ್ಮಾಯಿ ಅವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದು, ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶವನ್ನ ಕನಿಷ್ಠ ಒಂದು ವಾರ ಮುಂದುವರಿಸಲು ಒತ್ತಾಯಿಸಿದ್ದಾರೆ.

ಪತ್ರದಲ್ಲಿ ಅವರು, 3 ವರ್ಷಗಳ ಬಳಿಕ ಬೆಳಗಾವಿಯಲ್ಲಿ 10 ದಿನಗಳ ಕಾಲದ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದಲ್ಲಿ ಪ್ರವಾಹ, ಅತಿವೃಷ್ಟಿ, ಉತ್ತರ ಕರ್ನಾಟಕದ ನೀರಾವರಿ ವಿಷಯಗಳು ಚರ್ಚೆಯಾಗಬೇಕು.

ಕೃಷಿ ಬಿಕ್ಕಟ್ಟುಗಳು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದ ಸಮಸ್ಯೆಗಳು, ಯುವಜನರನ್ನು ಕಾಡುತ್ತಿರುವ ನಿರುದ್ಯೋಗ, ಪ್ರಾದೇಶಿಕ ಅಸಮಾನತೆ ವಿಷಯಗಳನ್ನು ಪ್ರಧಾನವಾಗಿ ಚರ್ಚಿಸಬೇಕಾಗಿದೆ. ಆದರೆ, ಅಧಿವೇಶನ ನಡೆಯುವ ಸಂದರ್ಭದಲ್ಲೇ ದುರುದ್ದೇಶಪೂರ್ವಕವಾಗಿ ಕೆಲವು ದುಷ್ಟ ಶಕ್ತಿಗಳು ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗೆ ಹಾನಿ ಮಾಡಿವೆ ಎಂದಿದ್ದಾರೆ.

ಇದನ್ನೂ ಓದಿ: ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದವರನ್ನು ಗುಂಡಿಟ್ಟು ಕೊಲ್ಲಬೇಕು : ಸದನದಲ್ಲಿ ಸಚಿವ ಕೆ.ಎಸ್​. ಈಶ್ವರಪ್ಪ ಕೆಂಡ

ನಾಡ ಧ್ವಜ ಸುಡುವ ಮೂಲಕ ಕನ್ನಡಿಗರ ಭಾವನೆಗಳಿಗೆ ಅಪಮಾನ ಮಾಡುವ ಮೂಲಕ ಜನರ ಗಮನ ಬೇರೆಡೆ ಸೆಳೆಯುವ ಕೆಲಸ ಮಾಡುತ್ತಿವೆ. ಸರ್ಕಾರವು ಪ್ರತಿ ಪಕ್ಷಗಳ ನ್ಯಾಯಯುತ ಬೇಡಿಕೆಗಳನ್ನು ಪ್ರಜಾ ತಾಂತ್ರಿಕವಾಗಿ ಬಗೆಹರಿಸದೇ ಮೊಂಡು ಹಠಕ್ಕೆ ಬಿದ್ದಿದೆ.

ಇದರಿಂದಾಗಿ ಚರ್ಚೆಗೆ ಬೇಕಾದಷ್ಟು ಸಮಯ ಸಿಗುತ್ತಿಲ್ಲ. ಆದ್ದರಿಂದ ಈ ಮೇಲಿನ ಪ್ರಮುಖ ವಿಷಯಗಳನ್ನು ಚರ್ಚಿಸಲು ಅಧಿವೇಶನವನ್ನು ಕನಿಷ್ಠ ಒಂದು ವಾರ ಕಾಲ ವಿಸ್ತರಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.

ABOUT THE AUTHOR

...view details