ಕರ್ನಾಟಕ

karnataka

ETV Bharat / city

ಬೆಳಗಾವಿ : ಪ್ರತಿಭಟನೆಗೆ ಮುಂದಾದ ವಾಟಾಳ್​​ ನಾಗರಾಜ್ ಸೇರಿ ಹಲವು ಹೋರಾಟಗಾರರು ಖಾಕಿ ವಶಕ್ಕೆ

ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಹೋರಾಟಗಾರರು ಎಂಇಎಸ್ ವಿರುದ್ಧ ಘೋಷಣೆ ಕೂಗಿದರು. ಎಂಇಎಸ್ ವಿರುದ್ಧ ಉಗ್ರ ಕ್ರಮಕ್ಕೆ ಸರ್ಕಾರವನ್ನು ಆಗ್ರಹಿಸಿದರು. 15ಕ್ಕೂ ಅಧಿಕ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ..

By

Published : Dec 29, 2021, 1:17 PM IST

Updated : Dec 29, 2021, 1:36 PM IST

vatal nagaraj and protesters taken in to custody by belagavi police
ವಾಟಾಳ್​​ ನಾಗರಾಜ್ ಪೊಲೀಸರ ವಶಕ್ಕೆ

ಬೆಳಗಾವಿ: ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆಗೆ ಮುಂದಾದ ವಾಟಾಳ್​ ಪಕ್ಷದ ಮುಖಂಡ ವಾಟಾಳ್​​ ನಾಗರಾಜ್ ಸೇರಿ 15ಕ್ಕೂ ಹೆಚ್ಚು ಹೋರಾಟಗಾರರನ್ನು ಇಲ್ಲಿನ ಪೊಲೀಸರು ವಶಕ್ಕೆ ಪಡೆದುಕೊಂಡರು.

ಡಿ. 31ರಂದು ಕರ್ನಾಟಕ ಬಂದ್ ಹಿನ್ನೆಲೆ, ಬಂದ್​​ಗೆ ಬೆಂಬಲಿಸುವಂತೆ ಕೋರಲು ವಾಟಾಳ್​ ನಾಗರಾಜ್​​ ಬೆಳಗಾವಿಗೆ ಬಂದಿದ್ದರು. ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ ಅವರು, ರಾಷ್ಟ್ರಕವಿ ಕುವೆಂಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ವಾಟಾಳ್​​ ನಾಗರಾಜ್ ಪೊಲೀಸರ ವಶಕ್ಕೆ

ಇಂದು ಕುವೆಂಪು ಅವರ ಜನ್ಮ ದಿನೋತ್ಸವ ಹಿನ್ನೆಲೆ ಬೆಂಬಲಿಗರ ಜೊತೆ ಸೇರಿ ವಾಟಾಳ್​ ನಾಗರಾಜ್​ ಕುವೆಂಪು ಅವರ ಭಾವಚಿತ್ರಕ್ಕೆ ನಮಿಸಿದರು. ಕುವೆಂಪು ಪರ ಘೋಷಣೆ ಕೂಗಿದರು.

ಇದನ್ನೂ ಓದಿ:ಹೊಸ ವರ್ಷದ ಆರಂಭದಲ್ಲಿ ಬಂದ್ ಸಾಕಷ್ಟು ಜನರಿಗೆ ನಷ್ಟವಾಗಲಿದೆ : ಬಂದ್​ ಮುಂದೂಡುವಂತೆ ಕರವೇ ಮನವಿ

ನಂತರ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆಗೆ ಮುಂದಾದರು. ಆಗ ಪೊಲೀಸರು ವಾಟಾಳ್​ ನಾಗರಾಜ್ ಅವರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಹೋರಾಟಗಾರರು ಎಂಇಎಸ್ ವಿರುದ್ಧ ಘೋಷಣೆ ಕೂಗಿದರು. ಎಂಇಎಸ್ ವಿರುದ್ಧ ಉಗ್ರ ಕ್ರಮಕ್ಕೆ ಸರ್ಕಾರವನ್ನು ಆಗ್ರಹಿಸಿದರು. 15ಕ್ಕೂ ಅಧಿಕ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Last Updated : Dec 29, 2021, 1:36 PM IST

ABOUT THE AUTHOR

...view details