ಕರ್ನಾಟಕ

karnataka

ETV Bharat / city

ಆಕಸ್ಮಿಕ ಅಗ್ನಿ ಅವಘಡ: ಮನೆ ಬೆಂಕಿಗಾಹುತಿ - ಹಗರಿಬೊಮ್ಮನಹಳ್ಳಿ ಅಗ್ನಿ ಅವಘಡ

ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲ್ವಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಮನೆ ಸುಟ್ಟು ಅಪಾರ ಪ್ರಮಾಣದ ದವಸ ಧಾನ್ಯಗಳು ಸುಟ್ಟು ಕರಕಲಾದ ಘಟನೆ ಸಂಭವಿಸಿದೆ.

accidental-fire-incident-in-bellary
ಆಕಸ್ಮಿಕವಾಗಿ ತಗುಲಿದ ಬೆಂಕಿ

By

Published : Nov 12, 2020, 9:59 PM IST

ಬಳ್ಳಾರಿ: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಮನೆ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲ್ವಿ ಗ್ರಾಮದಲ್ಲಿ ನಡೆದಿದೆ.

ಬಯಲು ಪತ್ತಾರ ಗಂಗಮ್ಮ ಎಂಬುವವರ ಹಂಚಿನ ಮನೆಗೆ ಬೆಂಕಿ ತಗುಲಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದರಂದ ಯಾವುದೇ ಜೀವಹಾನಿಯಾಗಿಲ್ಲ. ಗ್ಯಾಸ್ ಸೋರಿಕೆಯಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಆಕಸ್ಮಿಕ ಬೆಂಕಿ
ಘಟನೆಯಲ್ಲಿ ಮನೆಯಲ್ಲಿದ್ದ ಬೆಲೆ ಬಾಳುವ ಸಾಮಾಗ್ರಿಗಳು, ದವಸ ಧಾನ್ಯಗಳು, ಬಟ್ಟೆಗಳು ಸಂಪೂರ್ಣ ಭಸ್ಮವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ತಹಶೀಲ್ದಾರರು, ಪೊಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ABOUT THE AUTHOR

...view details