ಕರ್ನಾಟಕ

karnataka

By

Published : Oct 5, 2019, 4:01 AM IST

ETV Bharat / city

ವಾಂತಿ-ಭೇದಿ ಪ್ರಕರಣ... ಕಲ್ಲುಕಂಭ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ

ಜಿಲ್ಲೆಯ ಕಲ್ಲುಕಂಭ ಗ್ರಾಮದ ಪರಿಶಿಷ್ಟರ ಕಾಲೋನಿಯಲ್ಲಿ ಕಾಣಿಸಿಕೊಂಡ ವಾಂತಿ- ಭೇದಿ, ಶುಕ್ರವಾರ ಕುರುಬ ಸಮುದಾಯದವರು ನೆಲೆಸಿರುವ ಓಣಿಗೂ ವ್ಯಾಪಿಸಿರುವ ಕಾರಣ, ಡಿಸಿ ನಕುಲ್, ಸಿಇಓ ಕೆ.ನಿತೀಶಕುಮಾರ, ಡಿಎಚ್​ ಡಾ. ಶಿವರಾಜ ಹೆಡೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾಂತಿ-ಭೇದಿ ಪ್ರಕರಣ...ಕಲ್ಲುಕಂಭ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ,ಪರಿಶೀಲನೆ

ಬಳ್ಳಾರಿ:ಜಿಲ್ಲೆಯ ಕಲ್ಲುಕಂಭ ಗ್ರಾಮದ ಪರಿಶಿಷ್ಟರ ಕಾಲೋನಿಯಲ್ಲಿ ಕಾಣಿಸಿಕೊಂಡ ವಾಂತಿ- ಭೇದಿ, ಶುಕ್ರವಾರ ಕುರುಬ ಸಮುದಾಯದವರು ನೆಲೆಸಿರುವ ಓಣಿಗೂ ವ್ಯಾಪಿಸಿರುವ ಕಾರಣ, ಡಿಸಿ ನಕುಲ್,ಸಿಇಓ ಕೆ.ನಿತೀಶಕುಮಾರ, ಡಿಎಚ್​ ಡಾ. ಶಿವರಾಜ ಹೆಡೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗುರುವಾರ ಬೆಳಗ್ಗೆಯಿಂದ ಗ್ರಾಮದಲ್ಲಿರುವ ಆರೋಗ್ಯ ಉಪ ಕೇಂದ್ರದಲ್ಲಿ 35ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಒಟ್ಟು 60 ಜನರಲ್ಲಿ ವಾಂತಿ -ಭೇದಿ ಕಾಣಿಸಿಕೊಂಡಿದೆ. ಕಲುಷಿತ ನೀರು ಸೇವನೆ ಹಿನ್ನೆಲೆ ವಾಂತಿ-ಭೇದಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ವಾಂತಿ-ಭೇದಿ ಕಾಣಿಸಿಕೊಂಡ ಪ್ರದೇಶಗಳಿಗೆ ನೀರು ಪೂರೈಸುವ ತೊಟ್ಟಿಗಳಿಂದ ನೀರಿನ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ಪ್ರಕರಣಕ್ಕೆ ಸ್ಪಷ್ಟ ಕಾರಣ ತಿಳಿದು ಬರಲಿದೆ ಎಂದು ಡಾ.ಲಕ್ಷ್ಮಣ ನಾಯಕ್ ತಿಳಿಸಿದ್ದಾರೆ.

ಇನ್ನು, ಗ್ರಾಮದಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ಹಿನ್ನೆಲೆ, ಕುಡಿಯುವ ನೀರು ಪೂರೈಕೆ ಮಾಡುವ ತೊಟ್ಟಿಯನ್ನು ಸ್ವಚ್ಛಗೊಳಿಸಲಾಗಿದೆ. ಕಲಬೆರಕೆ ನೀರು ಸಂಗ್ರಹವಾಗುವ ಸ್ಥಳಗಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ABOUT THE AUTHOR

...view details