ಕರ್ನಾಟಕ

karnataka

ಪ್ರತಿಪಕ್ಷದ ನಾಯಕರಿಗೀಗ ಬಾಯಿಗೆ ಬೀಗ ಹಾಕಿಕೊಳ್ಳುವ ಪರಿಸ್ಥಿತಿ: ಸಚಿವ ಬಿ.ಶ್ರೀರಾಮುಲು

ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ಸಿಗ್ತಿಲ್ಲ ಎಂಬುದಾಗಿ ಆರೋಪಿಸುತ್ತಿದ್ದ ಪ್ರತಿಪಕ್ಷದ ನಾಯಕರು ಬಾಯಿಗೆ ಬೀಗ ಹಾಕಿಕೊಂಡು ಕುಳಿತುಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಆರೋಗ್ಯ ಸಚಿವ ಸಚಿವ ಬಿ‌.ಶ್ರೀರಾಮುಲು ಟೀಕಿಸಿದ್ದಾರೆ.

By

Published : Oct 5, 2019, 9:25 PM IST

Published : Oct 5, 2019, 9:25 PM IST

health-minister-talking-against-congress

ಬಳ್ಳಾರಿ: ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ಸಿಗ್ತಿಲ್ಲ ಎಂಬುದಾಗಿ ಆರೋಪಿಸುತ್ತಿದ್ದ ಪ್ರತಿಪಕ್ಷದ ನಾಯಕರು ಬಾಯಿಗೆ ಬೀಗ ಹಾಕಿಕೊಂಡು ಕುಳಿತುಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಆರೋಗ್ಯ ಸಚಿವ ಸಚಿವ ಬಿ‌.ಶ್ರೀರಾಮುಲು ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಪರಿಹಾರ ತಡ ಆಗಿದ್ದಕ್ಕೆ ನಾನೂ ಎಲ್ಲರಲ್ಲೂ ಕ್ಷಮೆ ಕೇಳಿದ್ದೇನೆ. ಎನ್​ಡಿಆರ್​ಎಫ್ ಮತ್ತು ಎಸ್​​​​ಡಿಆರ್​ಎಫ್ ಮಾರ್ಗಸೂಚಿಯಂತೆ ಕೇಂದ್ರ ಸರ್ಕಾರ ₹ 1200 ಕೋಟಿ ಕೇಂದ್ರ ಬಿಡುಗಡೆ ಮಾಡಿದೆ. ಇನ್ನೂ ಅಧಿಕ ಪರಿಹಾರ ಬೇಕಿದೆ. ಈ ಕುರಿತು ರಾಜ್ಯದ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿ ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡುತ್ತೇವೆ. ಇದರಲ್ಲಿ ರಾಜಕಾರಣ ಮಾಡುವುದು ತಪ್ಪು ಎಂದು ತಿಳಿಸಿದರು.

ಆರೋಗ್ಯ ಸಚಿವ ಸಚಿವ ಬಿ‌.ಶ್ರೀರಾಮುಲು

ಅಧಿಕಾರ ಕಳೆದುಕೊಂಡ ಕೈ ನಾಯಕರು ವಿಚಲಿತ:

ಕಾಂಗ್ರೆಸ್​ ನಾಯಕರು ಅಧಿಕಾರ ಕಳೆದುಕೊಂಡು ವಿಚಲಿತರಾಗಿದ್ದಾರೆ‌. ರಾಹುಲ್ ಗಾಂಧಿ ಒಂದು ಕಡೆ, ಸೋನಿಯಾ ಗಾಂಧಿ ಮತ್ತೊಂದು ಕಡೆ ಹೇಳಿಕೆಗಳನ್ನು ಕೊಡುತ್ತಾರೆ. ರಾಜ್ಯದಲ್ಲಿ ಪ್ರತಿಪಕ್ಷ ನಾಯಕರಿಲ್ಲ. ಕಾಂಗ್ರೆಸ್ ಪಕ್ಷದಲ್ಲೇ ಭಿನ್ನಾಭಿಪ್ರಾಯಗಳಿವೆ ಎಂದರು.

ಉಪಚುನಾವಣೆ ನಂತರಬಳ್ಳಾರಿ ವಿಭಜನೆನಿರ್ಧಾರ:

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಎಲ್ಲಾ ಶಾಸಕರ ಅಭಿಪ್ರಾಯ ಪಡೆದಿದ್ದಾರೆ. ನಾನೂ ಸರ್ಕಾರದ ಭಾಗ. ಈ ಬಗ್ಗೆ ಏನನ್ನೂ ಹೇಳುವುದಿಲ್ಲ. ಉಪಚುನಾವಣೆ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ. ಹೊಸಪೇಟೆ ಉಪಚುನಾವಣಾ ವಿಚಾರವಾಗಿ ಪಕ್ಷದ ತಿರ್ಮಾನಕ್ಕೆ ಬದ್ಧ. ಅಲ್ಲಿ ಯಾರೇ ಸ್ಫರ್ಧಿಸಲಿ ಅವರ ಪರ ಕೆಲಸ ಮಾಡುತ್ತೇವೆ ಎಂದು ಶ್ರೀರಾಮುಲು ಹೇಳಿದರು.

ABOUT THE AUTHOR

...view details