ಹೊಸಪೇಟೆ: ಲಾಕ್ಡೌನ್ನಿಂದಾಗಿ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಪ್ರಧಾನಮಂತ್ರಿ ಮೇಲಿಟ್ಟಿದ್ದ ಎಲ್ಲಾ ನಿರೀಕ್ಷೆಗಳು ಹುಸಿಯಾಗಿವೆ ಎಂದು ಕುಟುಂಬವೊಂದು ಮನೆ ಮುಂದೆ ಪ್ರತಿಭಟನೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.
ನಗರದ ಚಿತ್ತವಾಡಿಗಿಯಲ್ಲಿ ಇಂದು ಎಸ್ಎಫ್ಐ ಸಂಘಟನೆ ತಾಲೂಕು ಅಧ್ಯಕ್ಷರ ಮನೆಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣವನ್ನು ನಾವೆಲ್ಲಾ ಕೇಳಿದ್ದೇವೆ. ಆದ್ರೆ ಅವರ ಭಾಷಣದಿಂದ ಜನಸಾಮಾನ್ಯರ ಬದುಕಿನ ಬಂಡಿ ಮುನ್ನಡೆಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಅವರು ಬಡವರಿಗೆ, ಅಲೆಮಾರಿ ಜನಾಂಗದವರಿಗೆ, ಬೀದಿಬದಿಯ ವ್ಯಾಪಾರಿಗಳಿಗೆ ಪರಿಹಾರ ಘೋಷಣೆ ಮಾಡುತ್ತಾರೆ ಎಂಬ ನಿರೀಕ್ಷೆ ಇತ್ತು.