ಕರ್ನಾಟಕ

karnataka

ETV Bharat / city

ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣ: ಬೈಕ್ ಸವಾರರು ಮೃತ - ಬೆಂಗಳೂರು ಆ್ಯಕ್ಸಿಡೆಂಟ್​ ನ್ಯೂಸ್

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೆಟ್ಟಹಲಸೂರಿನ ನಿವಾಸಿ ಉದಯಕುಮಾರ್(58) ಎನ್ನುವವರು ಮೃತಪಟ್ಟಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಮೀನು ವ್ಯಾಪಾರಿ ಮೃತಪಟ್ಟಿದ್ದಾರೆ.

2 bike riders killed in 2 different accident at Bengaluru
ಬೈಕ್ ಅಪಘಾತದಲ್ಲಿ ಇಬ್ಬರ ಸಾವು

By

Published : Jan 9, 2022, 3:53 AM IST

ಬೆಂಗಳೂರು: ನಗರದ ಬಾಣಸವಾಡಿ ಮತ್ತು ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೆಟ್ಟಹಲಸೂರಿನ ನಿವಾಸಿ ಉದಯಕುಮಾರ್(58) ಎನ್ನುವವರು ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಉದಯ್ ಕುಮಾರ್ ದ್ವಿಚಕ್ರ ವಾಹನದಲ್ಲಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೋಗುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ವಾಹನವೊಂದು ಉದಯ್ ಕುಮಾರ್‌ಗೆ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ

ಮತ್ತೊಂದು ಪ್ರಕರಣದಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಮೀನು ವ್ಯಾಪಾರಿ ಮೃತಪಟ್ಟಿರುವ ಘಟನೆ ಬಾಣಸವಾಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಬುಸಾ ಪಾಳ್ಯದ ನಿವಾಸಿ ಜೀವರ್ಗೀಸ್ ಮೃತರು. ಟಿ.ಸಿ.ಪಾಳ್ಯದಲ್ಲಿ ಮೀನು ವ್ಯಾಪಾರ ಮುಗಿಸಿಕೊಂಡು ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಮನೆಗೆ ಹೋಗುತ್ತಿದ್ದರು. ಈ ವೇಳೆ ಅಗ್ರಹಾರ ಸರ್ಕಲ್ ಬಳಿ ಅತೀ ವೇಗವಾಗಿ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಜೀವರ್ಗೀಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಣಸವಾಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ಪತ್ನಿ ಎದುರೇ ನವ ವಿವಾಹಿತನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ

ABOUT THE AUTHOR

...view details